ಕಾರ್ಮಿಕರಿಗೆ ಕೋವಿಡ್ ಪರಿಹಾರದಲ್ಲಿ ಅನ್ಯಾಯ : ಕನ್ಯಾನದಲ್ಲೂ ಹೋರಾಟ ಸಮಿತಿ ರಚನೆ - Karavali Times ಕಾರ್ಮಿಕರಿಗೆ ಕೋವಿಡ್ ಪರಿಹಾರದಲ್ಲಿ ಅನ್ಯಾಯ : ಕನ್ಯಾನದಲ್ಲೂ ಹೋರಾಟ ಸಮಿತಿ ರಚನೆ - Karavali Times

728x90

3 August 2021

ಕಾರ್ಮಿಕರಿಗೆ ಕೋವಿಡ್ ಪರಿಹಾರದಲ್ಲಿ ಅನ್ಯಾಯ : ಕನ್ಯಾನದಲ್ಲೂ ಹೋರಾಟ ಸಮಿತಿ ರಚನೆ

ಬಂಟ್ವಾಳ, ಆಗಸ್ಟ್ 03, 2021 (ಕರಾವಳಿ ಟೈಮ್ಸ್) : ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರಿಹಾರ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೀಡಲು ಆದೇಶವಾಗಿದ್ದು, ಪರಿಹಾರ ಹಣ ಬೆರಳೆಣಿಕೆಯ ಕಾರ್ಮಿಕರಿಗೆ ಮಾತ್ರ ದೊರೆತಿದೆ. ಹೆಚ್ಚಿನ ನೋಂದಾಯಿತ ಕಾರ್ಮಿಕರಿಗೆ ಸಿಗದೆ ಅನ್ಯಾಯವಾಗಿದೆ. ಅಲ್ಲದೆ ಕಲ್ಯಾಣ ಮಂಡಳಿಯಿಂದ ಪ್ರತಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆಯಾಗಿದ್ದು ಆಹಾರ ಕಿಟ್ ಎಲ್ಲಾ ಕಾರ್ಮಿಕರಿಗೆ ನೀಡುವಲ್ಲಿ ಕಾರ್ಮಿಕ ಇಲಾಖೆ ವಿಫಲವಾಗಿದೆ.  ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಆಹಾರ ಕಿಟ್ ವಿತರಣೆಯಲ್ಲಿ ಮದ್ಯ ಪ್ರವೇಶಿಸಿ ತಮ್ಮ ಬೆಂಬಲಿಗರಿಗೆ ಮಾತ್ರ ಆಹಾರ ಕಿಟ್ ವಿತರಿಸಿ ನೈಜ ನೋಂದಾಯಿತ ಕಾರ್ಮಿಕರಿಗೆ ಅನ್ಯಾಯವೆಸಗಿದ್ದಾರೆ. ಕೂಡಲೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರಿಹಾರ ಧನ ಹಾಗೂ ಆಹಾರ ಕಿಟ್‍ಗಳನ್ನು ವಿತರಿಸುವಂತೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಂಘ ಸಿಐಟಿಯು ವತಿಯಿಂದ ಪ್ರತೀ ಗ್ರಾಮ ಮಟ್ಟದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಮಿತಿ ರಚನಾ ಸಭೆ ಕನ್ಯಾನದಲ್ಲೂ ನಡೆಯಿತು. 

ಸಭೆಯಲ್ಲಿ ಭಾಗವಹಿಸಿದ್ದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ, ಸಂಘಟನೆಗಳ ಹೋರಾಟದಿಂದ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ರಚನೆಯಾಗಿದ್ದು, ಇದೀಗ ಕಲ್ಯಾಣ ಮಂಡಳಿಯ ಹಣವನ್ನು ಸರಕಾರ ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿದರು. ಈ ನಿಟ್ಟಿನಲ್ಲಿ ಕಾರ್ಮಿಕ ಸಮೂಹ ಸಂಘಟಿತರಾಗಿ ಹೋರಾಟ ನಡೆಸುವಂತೆ ಕರೆ ನೀಡಿದರು. 

ಕನ್ಯಾನ ಗ್ರಾಮ ಪಂಚಾಯತ್ ಅದ್ಯಕ್ಷ ಕೆ ಪಿ ಅಬ್ದುಲ್ ರಹಿಮಾನ್ ಮಾತನಾಡಿ ಸಿಐಟಿಯು ಕಾರ್ಮಿಕರ ಪರವಾಗಿ ನಡೆಸುವ ಎಲ್ಲಾ ರೀತಿಯ ಹೋರಾಟಗಳಿಗೂ ನಿರಂತರ ಬೆಂಬಲ ನೀಡುವುದಾಗಿ ಸಭೆಯಲ್ಲಿ ಘೋಷಿಸಿದರು. 

ಇದೇ ವೇಳೆ ಕನ್ಯಾನ ನೂತನ ಗ್ರಾಮ ಸಮಿತಿ ರಚಿಸಲಾಯಿತು. ಅದ್ಯಕ್ಷರಾಗಿ ಈಶ್ವರ ಗೌಡ, ಕಾರ್ಯದರ್ಶಿಯಾಗಿ ವಿಶ್ವನಾಥ, ಉಪಾಧ್ಯಕ್ಷರುಗಳಾಗಿ ದಾಮೋದರ ಹಾಗೂ ಜಯಾನಂದ ಕಣಿಯೂರು, ಜೊತೆ ಕಾರ್ಯದರ್ಶಿಗಳಾಗಿ ಅರುಣ್ ಹಾಗೂ ಪ್ರಕಾಶ್, ಸಂಘಟನಾ ಕಾರ್ಯದರ್ಶಿಯಾಗಿ ರಮೇಶ್ ಕಣಿಯೂರು, ಕೋಶಾಧಿಕಾರಿಯಾಗಿ ಅಣ್ಣು ಮೂಲ್ಯ ಅವರನ್ನು ಆರಿಸಲಾಯಿತು. 

  • Blogger Comments
  • Facebook Comments

0 comments:

Post a Comment

Item Reviewed: ಕಾರ್ಮಿಕರಿಗೆ ಕೋವಿಡ್ ಪರಿಹಾರದಲ್ಲಿ ಅನ್ಯಾಯ : ಕನ್ಯಾನದಲ್ಲೂ ಹೋರಾಟ ಸಮಿತಿ ರಚನೆ Rating: 5 Reviewed By: karavali Times
Scroll to Top