ಮೈಸೂರು ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಪತ್ರಕರ್ತನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು - Karavali Times ಮೈಸೂರು ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಪತ್ರಕರ್ತನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು - Karavali Times

728x90

16 September 2021

ಮೈಸೂರು ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಪತ್ರಕರ್ತನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು

  ಮೈಸೂರು, ಸೆಪ್ಟೆಂಬರ್ 17, 2021 (ಕರಾವಳಿ ಟೈಮ್ಸ್) : ದೇವಸ್ಥಾನ ತೆರವು ಕಾರ್ಯಾಚರಣೆ ವಿರೋಧಿಸಿ ಗುರುವಾರ ನಗರದಲ್ಲಿ ಪರಿವಾರ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಉರ್ದು ದೈನಿಕ ಹಾಗೂ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತ ಮೊಹಮ್ಮದ್ ಸಪ್ಧಾರ್ ಖೈಸರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಪ್ರತಿಭಟನಾ ಸ್ಥಳದಲ್ಲಿ ಬಿಗು ವಾತಾವರಣ ಸೃಷ್ಟಿಸಿತ್ತು. ಹಿಂ

ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಅವರ ಹೇಳಿಕೆಯನ್ನು ರೆಕಾರ್ಡಿಂಗ್ ಮಾಡುತ್ತಿದ್ದ ವೇಳೆ ಕೌಸರ್ ನ್ಯೂಸ್ ಪ್ರಧಾನ ಸಂಪಾದಕ ಮೊಹಮ್ಮದ್ ಸಪ್ಧಾರ್ ಖೈಸರ್ ಅವರ ಮೇಲೆ ಈ ಹಲ್ಲೆ ನಡೆಸಲಾಗಿದೆ. 

ಪ್ರತಿಭಟನೆಯನ್ನು ರೆಕಾರ್ಡ್ ಮಾಡಿಕೊಳ್ಳುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವೇದಿಕೆ ಕಾರ್ಯಕರ್ತರು, ವಿಡಿಯೋವನ್ನು ಡಿಲೀಟ್ ಮಾಡುವಂತೆ ಒತ್ತಾಯಿಸಿ ಮೊಹಮ್ಮದ್ ಮೇಲೆ ಹಲ್ಲೆ ನಡೆಸಿದ್ದಾರೆ. ಪತ್ರಕರ್ತ ಎಂದು ಹೇಳಿದ್ದರೂ ಪೊಲೀಸರ ಸಮ್ಮುಖದಲ್ಲಿಯೇ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ತಕ್ಷಣ ಪೊಲೀಸರು ಕೋಟೆ ಆಂಜನೇಯ ಸ್ವಾಮಿ ದೇವಾಲಯ ಬಳಿ ಇರುವ ಕೋಣೆಗೆ ಪತ್ರಕರ್ತನನ್ನು ಕರೆತಂದು ರಕ್ಷಣೆ ನೀಡಿದ್ದಾರೆ. 

 ಪ್ರತಿಭಟನಾ ಸ್ಥಳದ ಒಳಗಿದ್ದ ಅಪರಿಚಿತರಿಂದ ಈ ಘಟನೆ ನಡೆದಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಪತ್ರಕರ್ತ ಎಂದು ತಿಳಿದ ಮೇಲೂ ಪ್ರತಿಭಟನಾಕಾರರು ಹಲ್ಲೆಯನ್ನು ಮುಂದುವರೆಸಿದ್ದಾಗಿ ಸ್ಥಳದಲ್ಲಿದ್ದ ಮಾಧ್ಯಮ ಪ್ರತಿನಿಧಿಗಳು ಹೇಳಿದ್ದಾರೆ.  

 ಪತ್ರಕರ್ತನ ಮೇಲಿನ ಹಲ್ಲೆ ಘಟನೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರನ್ನು ಆಗ್ರಹಿಸಿದೆ. ಧಾರ್ಮಿಕ ಕಾರ್ಯಕ್ರಮಗಳ ಸುದ್ದಿ ಮಾಡುವಾಗ ಪತ್ರಕರ್ತರಿಗೆ ರಕ್ಷಣೆ ನೀಡಬೇಕೆಂದು ಇದೇ ವೇಳೆ ಪತ್ರಕರ್ತರು ಒತ್ತಾಯಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮೈಸೂರು ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಪತ್ರಕರ್ತನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು Rating: 5 Reviewed By: karavali Times
Scroll to Top