ಪುತ್ತೂರು, ಅಕ್ಟೋಬರ್ 10, 2021 (ಕರಾವಳಿ ಟೈಮ್ಸ್) : ತಾಲೂಕಿನ ಬಲ್ನಾಡು ಗ್ರಾಮದ ಬಲ್ನಾಡು ಉಳ್ಳಾಳ್ತಿ ಕಾಂಪ್ಲೆಕ್ಸ್ ಸಮೀಪ ಭಾನುವಾರ ಬೆಳಿಗ್ಗೆ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬಲ್ನಾಡು-ಪಳ್ಳಿಕರೆ ನಿವಾಸಿ ಅಬ್ದುಲ್ ಅಝೀಝ್ ಅವರು ಮೃತಪಟ್ಟಿದ್ದಾರೆ.
ಭಾನುವಾರ ಬೆಳಿಗ್ಗೆ 8 ಗಂಟೆ ವೇಳೆಗೆ ಪುತ್ತೂರು-ಉಜ್ರುಪಾದೆ ರಸ್ತೆಯಲ್ಲಿ ಪುತ್ತೂರು ಕಡೆಯಿಂದ ಉಜ್ರುಪಾದೆ ಕಡೆಗೆ ಲಾರಿ ಚಾಲಕ ಸುಧಾಕರ ಶೆಟ್ಟಿ ಅತೀ ವೇಗ ಹಾಗೂ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಉಜ್ರುಪಾದೆ ಕಡೆಯಿಂದ ಪುತ್ತೂರು ಕಡೆಗೆ ಬೈಕಿನಲ್ಲಿ ತನ್ನ ಅಂಗಡಿಗೆ ತೆರಳುತ್ತಿದ್ದ ಬಲ್ನಾಡು ಪಳ್ಳಿಕೆರೆ ನಿವಾಸಿ ಅಬ್ದುಲ್ ಅಝೀಝ್ ಅವರ ಬೈಕಿಗೆ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಅಝೀಝ್ ಅವರ ಬೈಕ್ ರಸ್ತೆಗೆ ಮಗುಚಿ ಬಿದ್ದಿದ್ದು, ಸವಾರ ಅಝೀಝ್ ರಸ್ತೆಗೆಸೆಯಲ್ಪಟ್ಟಿದ್ದ ವೇಳೆ ಲಾರಿ ಆತನ ಮೇಲೆಯೇ ಚಲಿಸಿದ ಪರಿಣಾಮ ತಲೆಗೆ ಗಂಭೀರ ಪೆಟ್ಟು ಬಿದ್ದಿದೆ. ತಕ್ಷಣ ಅವರನ್ನು ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಲ್ನಾಡು ನಿವಾಸಿ ಅಬ್ದುಲ್ ಖಾದರ್ ಎಂಬವರು ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 84/2021 ಕಲಂ 279, 304(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment