ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು - Karavali Times ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು - Karavali Times

728x90

18 November 2021

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ, ನವೆಂಬರ್ 18, 2021 (ಕರಾವಳಿ ಟೈಮ್ಸ್) : ತಾಲೂಕಿನ ಕೊಟ್ಟೂರು ಗ್ರಾಮದ ಇದಿಂಗಳ ದರ್ಖಾಸು ಮನೆ ನಿವಾಸಿ ಬಾಬು ಗೌಡ ಅವರ ಪುತ್ರ ವಿಶ್ವನಾಥ ಗೌಡ ಅವರ ಮನೆಗೆ ಬುಧವಾರ ಬೆಳಿಗ್ಗೆಯಿಂದ ಮಧ್ಯಾಹ್ನ ನಡುವಿನ ಅವಧಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ಸಹಿತ ನಗದು ಕಳವುಗೈದು ಪರಾರಿಯಾಗಿದ್ದಾರೆ. 

ಮನೆಯ ಹಿಂಬಾಗಿಲ ಚಿಲಕ ಮೀಟಿ ಒಳ ಪ್ರವೇಶಿಸಿದ ಕಳ್ಳರು ಮನೆಯೊಳಗಿನ ಕಪಾಟಿನಲ್ಲಿದ್ದ ಸುಮಾರು 1.26 ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ 500/- ರೂಪಾಯಿ ನಗದು ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ. 

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 97/2021 ಕಲಂ 454, 380 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು Rating: 5 Reviewed By: karavali Times
Scroll to Top