ಇಂದು ಸಂಜೆ (ಜ 29) ನಂದಾವರ ಮದ್ರಸ ನೂತನ ಕಟ್ಟಡಕ್ಕೆ ಶಿಲಾನ್ಯಾಸ : ಸಿರಾಜುದ್ದೀನ್ ಖಾಸಿಮಿ ಮುಖ್ಯ ಭಾಷಣ - Karavali Times ಇಂದು ಸಂಜೆ (ಜ 29) ನಂದಾವರ ಮದ್ರಸ ನೂತನ ಕಟ್ಟಡಕ್ಕೆ ಶಿಲಾನ್ಯಾಸ : ಸಿರಾಜುದ್ದೀನ್ ಖಾಸಿಮಿ ಮುಖ್ಯ ಭಾಷಣ - Karavali Times

728x90

29 January 2022

ಇಂದು ಸಂಜೆ (ಜ 29) ನಂದಾವರ ಮದ್ರಸ ನೂತನ ಕಟ್ಟಡಕ್ಕೆ ಶಿಲಾನ್ಯಾಸ : ಸಿರಾಜುದ್ದೀನ್ ಖಾಸಿಮಿ ಮುಖ್ಯ ಭಾಷಣ

ಬಂಟ್ವಾಳ, ಜನವರಿ 29, 2022 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ನಂದಾವರ ಕೇಂದ್ರ ಜುಮಾ ಮಸೀದಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಮಾಯತುಲ್ ಇಸ್ಲಾಂ ಮದ್ರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಇಂದು (ಜನವರಿ 29) ಸಂಜೆ 5 ಗಂಟೆಗೆ ನೆರವೇರಲಿದೆ. 

ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು ದುವಾಶಿರ್ವಚನಗೈಯಲಿದ್ದು, ಸಮಸ್ತ ಕರ್ನಾಟಕ ಮುಶಾವರ ಕಾರ್ಯದರ್ಶಿ ಹಾಜಿ ಅಬ್ದುಲ್ ಖಾದಿರ್ ಅಲ್-ಖಾಸಿಮಿ ಬಂಬ್ರಾಣ ಮದ್ರಸ ಕಟ್ಟಡಕ್ಕೆ ಶಿಲಾನ್ಯಾಸಗೈಯಲಿದ್ದು, ಮಸೀದಿ ಅಧ್ಯಕ್ಷ ಮುಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸುವರು. ಹಾಫಿಳ್ ಸಿರಾಜುದ್ದೀನ್ ಅಲ್-ಖಾಸಿಮಿ ಪತ್ತನಾಪುರಂ ಮುಖ್ಯ ಭಾಷಣಗೈಯುವರು. 

ನಂದಾವರ ಮಸೀದಿ ಖತೀಬ್ ಕಾಸಿಂ ದಾರಿಮಿ, ಮದ್ರಸ ಮುಖ್ಯ ಶಿಕ್ಷಕ ಉಮರ್ ದಾರಿಮಿ ಪಟ್ಟೋರಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಸೀದಿ ಆಡಳಿತ ಸಮಿತಿ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಇಂದು ಸಂಜೆ (ಜ 29) ನಂದಾವರ ಮದ್ರಸ ನೂತನ ಕಟ್ಟಡಕ್ಕೆ ಶಿಲಾನ್ಯಾಸ : ಸಿರಾಜುದ್ದೀನ್ ಖಾಸಿಮಿ ಮುಖ್ಯ ಭಾಷಣ Rating: 5 Reviewed By: karavali Times
Scroll to Top