ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ದಿ, ಜ್ಞಾನದಿಂದ ಬರವಣಿಗೆ ಆಸಕ್ತಿ ವೃದ್ದಿ : ಪತ್ರಕರ್ತ ಸಂದೀಪ್ ಸಾಲ್ಯಾನ್ - Karavali Times ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ದಿ, ಜ್ಞಾನದಿಂದ ಬರವಣಿಗೆ ಆಸಕ್ತಿ ವೃದ್ದಿ : ಪತ್ರಕರ್ತ ಸಂದೀಪ್ ಸಾಲ್ಯಾನ್ - Karavali Times

728x90

20 January 2022

ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ದಿ, ಜ್ಞಾನದಿಂದ ಬರವಣಿಗೆ ಆಸಕ್ತಿ ವೃದ್ದಿ : ಪತ್ರಕರ್ತ ಸಂದೀಪ್ ಸಾಲ್ಯಾನ್

ಬಂಟ್ವಾಳ, ಜನವರಿ 20, 2022 (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಟಾಡಿ ಗ್ರಾಮದ ನಲ್ಕೆಮಾರ್ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾ ಮಕ್ಕಳಿಗೆ ಕಾರ್ಯಕ್ರಮಗಳ ಸುದ್ದಿ ಬರೆಯುವ ವಿಧಾನದ ಬಗ್ಗೆ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಪತ್ರಕರ್ತ ಸಂದೀಪ್ ಸಾಲ್ಯಾನ್ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿಯೇ ಬರವಣಿಗೆಯ ಹಾದಿ ಹಿಡಿಯುವುದು ಒಳ್ಳೆಯದು. ಮಕ್ಕಳು ತಮ್ಮ ಸುತ್ತಮುತ್ತ ನಡೆಯುವ ಕಾರ್ಯಕ್ರಮದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಗಮನ  ಹರಿಸಿ ವರದಿ ಮಾಡುವ ಮೂಲಕ ಬಾಲ್ಯದಿಂದಲೇ ಬರಹಗಾರರಾಗಲು ಸಾಧ್ಯ. ನಿರಂತರ ಪತ್ರಿಕೆಗಳನ್ನು ಓದುವ ಮೂಲಕ ನಮ್ಮ ಜ್ಞಾನ ವೃದ್ಧಿಯಾಗುತ್ತದೆ. ತಮ್ಮಲ್ಲಿರುವ ಜ್ಞಾನದಿಂದ ಬರವಣಿಗೆಗೆ ಸಹಕಾರಿಯಾಗುತ್ತದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಸದಸ್ಯ, ಪತ್ರಕರ್ತ ಯಾದವ ಅಗ್ರಬೈಲು ಉಪಸ್ಥಿತರಿದ್ದರು. ಸಹಶಿಕ್ಷಕಿ ಮೋಹಿನಿ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಜ್ಯೋತಿ ಕುಮಾರಿ ವಂದಿಸಿದರು. ಶಿಕ್ಷಕರಾದ ಶಶಿಕಲಾ, ಜಗನ್ನಾಥ, ಮಮತಾ, ಅಕ್ಷತಾ ಸಹಕರಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ದಿ, ಜ್ಞಾನದಿಂದ ಬರವಣಿಗೆ ಆಸಕ್ತಿ ವೃದ್ದಿ : ಪತ್ರಕರ್ತ ಸಂದೀಪ್ ಸಾಲ್ಯಾನ್ Rating: 5 Reviewed By: karavali Times
Scroll to Top