ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸವಾಲು ಎದುರಿಸಲು ಸಿದ್ದರಾಗಬೇಕು : ಡಾ ರಮೇಶ್ ಸಾಲಿಯನ್ - Karavali Times ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸವಾಲು ಎದುರಿಸಲು ಸಿದ್ದರಾಗಬೇಕು : ಡಾ ರಮೇಶ್ ಸಾಲಿಯನ್ - Karavali Times

728x90

22 March 2022

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸವಾಲು ಎದುರಿಸಲು ಸಿದ್ದರಾಗಬೇಕು : ಡಾ ರಮೇಶ್ ಸಾಲಿಯನ್

ಬಂಟ್ವಾಳ ಎಸ್.ವಿ.ಎಸ್. ಪದವಿ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ





ಬಂಟ್ವಾಳ, ಮಾರ್ಚ್ 22, 2022 (ಕರಾವಳಿ ಟೈಮ್ಸ್) : ವಿದ್ಯಾರ್ಥಿ ಜೀವನವು ಮಾನವ  ಬದುಕಿನ ಬಹುಮುಖ್ಯ ಘಟ್ಟ. ವಿದ್ಯಾರ್ಥಿಗಳು ಪಠ್ಯಕ್ಕೆ ಆದ್ಯತೆ ನೀಡಿದಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಸಂಶೋಧನಾ ವಿಭಾಗದ ನಿರ್ದೇಶಕ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ ರಮೇಶ್ ಸಾಲಿಯಾನ್ ಹೇಳಿದರು. 

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಕಾಲೇಜಿನ 2021-22ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು ನಿಶ್ಚಿತ ಗುರಿ ಇಟ್ಟುಕೊಂಡು ಸಮಯದ ಸದುಪಯೋಗದ ಜತೆಗೆ ಅವಿರತ ಪರಿಶ್ರಮದಿಂದ ಕ್ರಿಯಾಶೀಲ ಚಟುವಟಿಗಳನ್ನು ರೂಢಿಸಿಕೊಳ್ಳಬೇಕು. ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ಸವಾಲುಗಳನ್ನು ನಾವು ಎದುರಿಸುವುದಕ್ಕೆ ತಯಾರಾಗಬೇಕಾಗಿರುವುದು ಅನಿವಾರ್ಯವಾಗಿದೆ. ಸ್ವ ಉದ್ಯೋಗ ಪ್ರವೃತ್ತಿಯನ್ನು, ನಾಯಕತ್ವ ಗುಣವನ್ನು ರೂಢಿಸಿಕೊಳ್ಳುವುದರೊಂದಿಗೆ, ಹಿರಿಯರೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವುದು ಆದ್ಯ ಕರ್ತವ್ಯ ಎಂದರು. 

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಡಾ ಸುಯೋಗ ವರ್ಧನ್ ಡಿ ಎಂ ಮಾತನಾಡಿ, ಉತ್ತಮ ನಾಯಕತ್ವ ಗುಣಗಳನ್ನು ಕಾಲೇಜು ಮಟ್ಟದಿಂದಲೇ ರೂಢಿಸಿಕೊಂಡು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಹಾರೈಸಿದರು. 

ಕಾಲೇಜಿನ ಹಿರಿಯ ಸಹಪ್ರಾಧ್ಯಾಪಕ ಪ್ರೊ ಮಹಾಬಲೇಶ ಶರ್ಮಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷÀ ಕೋಶಿಕ್ ವಿ ರಾವ್ ಸ್ವಾಗತಿಸಿ, ಉಪಾಧ್ಯಕ್ಷ ಶ್ರೇಯಸ್ ಅತಿಥಿ ಪರಿಚಯ ಮಾಡಿದರು. ಕಾರ್ಯದರ್ಶಿ ನಿಶ್ಮಿತಾ ರೈ ವಿದ್ಯಾರ್ಥಿ ಸಂಘದ ವರದಿ ವಾಚಿಸಿದರು. ಜೊತೆ ಕಾರ್ಯದರ್ಶಿ ಮೋಕ್ಷ ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸವಾಲು ಎದುರಿಸಲು ಸಿದ್ದರಾಗಬೇಕು : ಡಾ ರಮೇಶ್ ಸಾಲಿಯನ್ Rating: 5 Reviewed By: karavali Times
Scroll to Top