ಮಾರ್ಚ್ 5 ರಂದು ಮಂಗಳೂರು ಪುರಭವನದಲ್ಲಿ ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ - Karavali Times ಮಾರ್ಚ್ 5 ರಂದು ಮಂಗಳೂರು ಪುರಭವನದಲ್ಲಿ ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ - Karavali Times

728x90

3 March 2022

ಮಾರ್ಚ್ 5 ರಂದು ಮಂಗಳೂರು ಪುರಭವನದಲ್ಲಿ ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಮಾರ್ಚ್ 03, 2022 (ಕರಾವಳಿ ಟೈಮ್ಸ್) : ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಮಾರ್ಚ್ 5 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಪುರಭವನದಲ್ಲಿ ನಡೆಯಲಿದೆ. 

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸ್ಥೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಸುದರ್ಶನ್ ಬಿ ಹೊಳ್ಳ ವಿದ್ಯಾರ್ಥಿ ವೇತನ ವಿತರಿಸುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಜಿಲ್ಲಾ ಎಸ್ಪಿ ಸೊನಾವಣೆ ಋಷಿಕೇಶ್ ಭಗವಾನ್, ಜಿಲ್ಲಾ ನೋಂದಣಾಧಿಕಾರಿ ಶ್ರೀನಿಧಿ, ಮಂಗಳೂರು ಸಂಚಾರ ಉಪವಿಭಾಗ ಎಸಿಪಿ ನಟರಾಜ್, ಶ್ರೀರಾಂ ಫೈನಾನ್ಸ್ ಝೋನಲ್ ಬ್ಯುಸಿನಲ್ ಹೆಡ್ ಶ್ರೀಧರ ಮಟಮ್, ಕೆಎಂಸಿ ಇಂಟರ್‍ವೆನ್‍ಷನಲ್ ಕಾರ್ಡಿಯೋಜಿಸ್ಟ್ ಡಾ ಪದ್ಮನಾಭ ಕಾಮತ್, ಮಂಗಳೂರು ಸರಕಾರಿ ಹಿರಿಯ ಅಭಿಯೋಜಕ ನಾರಾಯಣ ಶೇರಿಗಾರ್, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ನರಸಿಂಹ ಹೆಗ್ಡೆ, ಶ್ರೀರಾಂ ಫೈನಾನ್ಸ್ ಸ್ಟೇಟ್ ಹೆಡ್ ಶರಶ್ಚಂದ್ರ ಭಟ್ ಕಾಕುಂಜೆ, ಹಿರಿಯ ಕಾರ್ಮಿಕ ಅಧಿಕಾರಿ ರಾಜಶೇಖರ್ ರೆಡ್ಡಿ, ಹಿರಿಯ ನ್ಯಾಯವಾದಿಗಳಾದ ಎಂ ಆರ್ ಬಳ್ಳಾಲ್, ಕೆಪಿಎ ಶುಕೂರ್ ಲತಾ ಪಿಎಸ್, ಶ್ರೀರಾಂ ಫೈನಾನ್ಸ್ ಸ್ಟೇಟ್ ಲೀಗಲ್ ಹೆಡ್ ಉಲ್ಲಾಸ್ ನಾಯಕ್, ಸ್ಟೇಟ್ ಕಲೆಕ್ಷನ್ ಹೆಡ್ ನಾಗರಾಜ್ ಮೊದಲಾದವರು ಭಾಗವಹಿಸಲಿದ್ದಾರೆ. 

ಇದೇ ವೇಳೆ ಸಾಮಾಜಿಕ ಕಲಾ ಮತ್ತು ಕ್ರೀಡಾ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಮಹಾಲಿಂಗ ನಾಯಕ್ ಅಮೈ, ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ವಿಜೇತ ಕುಮಾರಿ ರೆಮೋನಾ ಇವೆಟ್ ಪರೇರಾ, ಏಷಿಯನ್ ಪವರ್ ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ಸ್ವರ್ಣ ಪದಕ ವಿಜೇತೆ ಶ್ರೀಮತಿ ದೀಪಾ ಕೆ ಎಸ್, ಪೊಲೀಸ್ ಇಲಾಖೆಯಲ್ಲಿ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿಗಳಾದ ಮೋಹನ್ (ಸೆನ್ ಪೊಲೀಸ್ ಠಾಣೆ ಮಂಗಳೂರು) ಹಾಗೂ ವಿಜಯ್ ಕಾಂಚನ್ (ಸೆನ್ ಪೊಲೀಸ್ ಠಾಣೆ ಮಂಗಳೂರು), ಮುಖ್ಯಮಂತ್ರಿ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿಗಳಾದ ಅಬ್ದುಲ್ ಜಬ್ಬಾರ್ ಕೆ, (ಸಿಸಿಬಿ ಘಟಕ ಮಂಗಳೂರು), ಸುಜನ್ ಶೆಟ್ಟಿ (ಸಿಸಿಬಿ ಘಟಕ ಮಂಗಳೂರು), ಶ್ರೀಮತಿ ನಯನ (ಪಾಂಡೇಶ್ವರ ಪೊಲೀಸ್ ಠಾಣೆ ಮಂಗಳೂರು) ಹಾಗೂ ಸಂಚಾರ ವಿಭಾಗದಲ್ಲಿ ರವಿ (ಸಂಚಾರ ಪೂರ್ವ ಠಾಣೆ ಮಂಗಳೂರು), ಜಯರಾಂ (ಸಂಚಾರ ಪಶ್ಚಿಮ ಠಾಣೆ ಮಂಗಳೂರು), ಆಂಜನಪ್ಪ ವಿ (ಸಂಚಾರ ಉತ್ತರ ಠಾಣೆ) ಹಾಗೂ ಯಶವಂತ (ಸಂಚಾರ ದಕ್ಷಿಣ ಠಾಣೆ) ಅವರನ್ನು ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ರೀಜನಲ್ ಬ್ಯುಸಿನೆಸ್ ಹೆಡ್ ಚೇತನ್ ಅರಸ್ ಹಾಗೂ ರೀಜನಲ್ ಕಲೆಕ್ಷನ್ ಹೆಡ್ ಪ್ರಮೋದ್ ಅಂಚನ್ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 5 ರಂದು ಮಂಗಳೂರು ಪುರಭವನದಲ್ಲಿ ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ Rating: 5 Reviewed By: karavali Times
Scroll to Top