ಕೊಡಾಜೆ : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ  - Karavali Times ಕೊಡಾಜೆ : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ  - Karavali Times

728x90

11 April 2022

ಕೊಡಾಜೆ : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ 

 ಬಂಟ್ವಾಳ, ಎಪ್ರಿಲ್ 12, 2022 (ಕರಾವಳಿ ಟೈಮ್ಸ್) : ತಾಲೂಕಿನ ಮಾಣಿ ಸಮೀಪದ ಕೊಡಾಜೆ ಆರಂಗಳ ಸೂಪರ್ ಮಾರ್ಕೆಟ್ ಎದುರು ಭಾಗದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಶವ ಕೊಳೆತು ಅಸ್ತಿಗಳು ಹೊರಗೆ ಬಂದ ಸ್ಥಿತಿಯಲ್ಲಿ ಕಂಡು ಬಂದಿದೆ. 

 ಸುಮಾರು 15-20 ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಗುರುತು-ಪರಿಚಯ‌ ಗೊತ್ತಾಗಿಲ್ಲ. ಯಾವಾಗ ಯಾವ ಕಾರಣಕ್ಕೆ ಈ ಕೃತ್ಯ ಎಸಗಲಾಗಿದೆ ಎಂಬುದು ಪೊಲೀಸ್ ತನಿಖೆಯಿಂದಷ್ಟೆ ತಿಳಿದು ಬರಬೇಕಾಗಿದೆ. 

 ಸ್ಥಳಕ್ಕೆ ವಿಟ್ಲ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವ ವಿಲೇವಾರಿಗೆ ಕ್ರಮ ಕೈಗೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕೊಡಾಜೆ : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ  Rating: 5 Reviewed By: karavali Times
Scroll to Top