ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ : ಕಿರುಚಾಡಿ ಸಾರ್ವಜನಿಕರ ಮೂಲಕ ಬಚಾವಾದ ಮಹಿಳೆಯರು - Karavali Times ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ : ಕಿರುಚಾಡಿ ಸಾರ್ವಜನಿಕರ ಮೂಲಕ ಬಚಾವಾದ ಮಹಿಳೆಯರು - Karavali Times

728x90

22 May 2022

ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ : ಕಿರುಚಾಡಿ ಸಾರ್ವಜನಿಕರ ಮೂಲಕ ಬಚಾವಾದ ಮಹಿಳೆಯರು

ಬಂಟ್ವಾಳ, ಮೇ 22, 2022 (ಕರಾವಳಿ ಟೈಮ್ಸ್) : ಟ್ರಾವೆಲ್ಸ್ ಕಾರು ಚಾಲಕನೋರ್ವ ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯರು ಆತಂಕಗೊಂಡು ಕಿರುಚಾಡುತ್ತಿದ್ದ ವೇಳೆ ಸಾರ್ವಜನಿಕರು ಅಪಹರಣವೆಂದು ತಿಳಿದು ಅಡ್ಡಗಟ್ಟಿ, ಪೆÇಲೀಸರಿಗೆ ಮಾಹಿತಿ ನೀಡಿದ ಘಟನೆ ಸಾಲೆತ್ತೂರು ಬಳಿ ನಡೆದಿದೆ.

ಮಂಗಳೂರು ಹೊರ ವಲಯದ ತೊಕ್ಕೊಟ್ಟು ಪಿಲಾರಿನ ಮಹಿಳೆಯರು ಪಣೋಲಿಬೈಲಿಗೆ ತೆರಳುವ ಹಿನ್ನೆಲೆ ಕದ್ರಿಯಿಂದ ಬಾಡಿಗೆ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಕಾರು ಚಾಲಕ ಕಾಡುಮಠ ನಿವಾಸಿ ಸಾಗರ್ (26) ಎಂಬಾತ ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿದ್ದು, ಗಾಬರಿಗೊಂಡ ಮಹಿಳೆಯರು ನೆರವಿಗಾಗಿ ಬೊಬ್ಬೆ ಹೊಡೆಯುತ್ತಿದ್ದ ವೇಳೆ ಸಾರ್ವಜನಿಕರು ಅಪಹರಣವೆಂದು ತಿಳಿದು ಕಾರನ್ನು ಸಾಲೆತ್ತೂರು ಬಳಿ ತಡೆದು ನಿಲ್ಲಿಸಿ, ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ವಿಟ್ಲ ಪೊಲೀಸರು ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ : ಕಿರುಚಾಡಿ ಸಾರ್ವಜನಿಕರ ಮೂಲಕ ಬಚಾವಾದ ಮಹಿಳೆಯರು Rating: 5 Reviewed By: karavali Times
Scroll to Top