ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ : ಅಕ್ರಮ ಜಾನುವಾರು ಸಾಗಾಟ ಬೇಧಿಸಿ ಆರೋಪಿ ಬಂಧನ - Karavali Times ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ : ಅಕ್ರಮ ಜಾನುವಾರು ಸಾಗಾಟ ಬೇಧಿಸಿ ಆರೋಪಿ ಬಂಧನ - Karavali Times

728x90

24 July 2022

ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ : ಅಕ್ರಮ ಜಾನುವಾರು ಸಾಗಾಟ ಬೇಧಿಸಿ ಆರೋಪಿ ಬಂಧನ

ಬಂಟ್ವಾಳ, ಜುಲೈ 24, 2022 (ಕರಾವಳಿ ಟೈಮ್ಸ್) : ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರು ಬಳಿ ಕಾರ್ಯಾಚರಣೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಸೈ ಹರೀಶ್ ನೇತೃತ್ವದ ಪೊಲೀಸರು ಅಕ್ರಮ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಗೂಡ್ಸ್ ಟೆಂಪೋ ವಾಹನದಲ್ಲಿ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ್ದು, ವಾಹನ, ಜಾನುವಾರು ಸಹಿತ ಓರ್ವ ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ. 

ಅಬ್ದುಲ್ ಹಮೀದ್ ಬಂಧಿತ ಆರೋಪಿಯಾಗಿದ್ದು, ಅಬ್ಬಾಸ್ ಮೂಲೆ ಪಾರಾರಿಯಾದ ಆರೋಪಿ. ಕಾರ್ಯಾಚರಣೆ ವೇಳೆ ಪೊಲೀಸರು ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಲಾಗಿದ್ದ ಒಂದು ದನ ಹಾಗೂ ಎರಡು ಗಂಡು ಕರುಗಳನ್ನು ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಒಂದೂವರೆ ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. 

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 54/2022 ಕಲಂ 5,7 ಮತ್ತು 12 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ : ಅಕ್ರಮ ಜಾನುವಾರು ಸಾಗಾಟ ಬೇಧಿಸಿ ಆರೋಪಿ ಬಂಧನ Rating: 5 Reviewed By: karavali Times
Scroll to Top