ಪಂಚಾಯಿತಿಗೆಗೆ ಬಂದ ವೇಳೆ ತಂಡದಿಂದ ಮಾರಣಾಂತಿಕ ಹಲ್ಲೆಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು - Karavali Times ಪಂಚಾಯಿತಿಗೆಗೆ ಬಂದ ವೇಳೆ ತಂಡದಿಂದ ಮಾರಣಾಂತಿಕ ಹಲ್ಲೆಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು - Karavali Times

728x90

21 July 2022

ಪಂಚಾಯಿತಿಗೆಗೆ ಬಂದ ವೇಳೆ ತಂಡದಿಂದ ಮಾರಣಾಂತಿಕ ಹಲ್ಲೆಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ಳಾರೆ, ಜುಲೈ 21, 2022 (ಕರಾವಳಿ ಟೈಮ್ಸ್) : ಇಲ್ಲಿನ ಠಾಣಾ ವ್ಯಾಪ್ತಿಯ ಸುಳ್ಯ ತಾಲೂಕು ಕಳಂಜ ಎಂಬಲ್ಲಿ ಮಂಗಳವಾರ ರಾತ್ರಿ ರಾಜಿ ಪಂಚಾಯಿತಿಕೆ ನೆಪದಲ್ಲಿ ಕರೆಸಿದ ತಂಡ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದ ಯುವಕ, ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ (18) ಮಸೂದ್(18) ಚಿಕಿತ್ಸೆ ಫಲಿಸದೆ ಗುರುವಾರ ಮಧ್ಯಾಹ್ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ವಿಚಾರಕ್ಕೆ ಸಂಬಂಧಿಸಿ ರಾಜಿ ಪಂಚಾಯಿತಿಕೆ ನಡೆಸಲು ಕರೆಸಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿತ್ತು. ಸೋಡಾ ಬಾಟ್ಲಿಯಿಂದ ಯುವಕನ ತಲೆಯ ಭಾಗಕ್ಕೆ ಎಂಟು ಮಂದಿ ಯುವಕರ ತಂಡವು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಮಸೂದ್ ಗಂಭೀರಾವಸ್ಥೆಗೆ ತಲುಪಿದ್ದ. ಸುಳ್ಯ ಆಸ್ಪತ್ರೆಗೆ ಸಾಗಿಸಿದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಮಸೂದ್ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾನೆ. 

ಕಾಸರಗೋಡು ತಾಲೂಕು ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ (18) ಎಂಬಾತ ಸುಮಾರು 1 ತಿಂಗಳ ಹಿಂದೆ ಸುಳ್ಯ ತಾಲೂಕು ಕಳಂಜ ಗ್ರಾಮದ ಕಳಂಜದಲ್ಲಿರುವ ಅಜ್ಜ ಅಬ್ಬು ಮುಕ್ರಿ ಅವರ ಮನೆಗೆ ಬಂದವನು ಸ್ಥಳೀಯವಾಗಿ ಕೂಲಿ ಕೆಲಸ ಮಾಡಿಕೊಂಡಿದ್ದ. ಮಂಗಳವಾರ ಸಂಜೆ ಮಸೂದ್ ಹಾಗೂ ಸುಧೀರ್ ಎಂಬಾತನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು ಈ ವೇಳೆ ಮಸೂದ್ ಸುಧೀರ್ ಗೆ ಹಲ್ಲೆ ನಡೆಸಿದ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ರಾಜಿ ಪಂಚಾಯತಿಗೆ ನಡೆಸುವ ಸಲುವಾಗಿ ದೂರುದಾರ ಇಬ್ರಾಹಿಂ ಶಾನಿಫ್ ಎಂಬಾತನೊಂದಿಗೆ ಮಸೂದನನ್ನು ಕರೆ ತರುವಂತೆ ಆರೋಪಿಗಳಾದ ಅಭಿಲಾಶ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್ ಮತ್ತು ಭಾಸ್ಕರ ಎಂಬವರು ತಿಳಿಸಿದ ಹಿನ್ನಲೆಯಲ್ಲಿ ಶಾನಿಫ್ ಅವರು ಮಸೂದ್ ನನ್ನು ರಾತ್ರಿ 11 ಗಂಟೆ ವೇಳೆಗೆ ನಗರಕ್ಕೆ ಕರೆದುಕೊಂಡು ಬಂದಿದ್ದು, ಈ ವೇಳೆ ಆರೋಪಿಗಳು ಒಟ್ಟು ಸೇರಿ ಏಕಾ ಏಕಿ ಮಸೂದನಿಗೆ ಕೈಯಿಂದ ಹಲ್ಲೆ ಮಾಡಲು ಪ್ರಾರಂಭಿಸಿದ್ದು, ಹಲ್ಲೆಯಿಂದ ಮಸೂದ್ ನೆಲಕ್ಕೆ ಬಿದ್ದಿದ್ದು ಬಿದ್ದಲ್ಲಿಗೆ ಅವರೆಲ್ಲರೂ ಕಾಲಿನಿಂದ ತುಳಿದು ಅವರ ಪೈಕಿ ಅಭಿಲಾಶ್ ಎಂಬಾತ ಖಾಲಿ ಜೂಸ್ ಬಾಟಲಿಯಿಂದ ಮಸೂದನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಮಸೂದ್ ರಾತ್ರಿ 1-30 ಗಂಟೆಗೆ ಸಮೀಪದ ಅಬೂಬಕ್ಕರ್ ಎಂಬವರ ಬಾವಿಯ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವನನ್ನು ಅಲ್ಲಿಂದ ಇಬ್ರಾಹಿಂ ಶಾನಿಫ್ ಉಪಚರಿಸಿ ಕಾರಿನಲ್ಲಿ ಸುಳ್ಯ, ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿಗೆ ಸಾಗಿಸುವಂತೆ ಸೂಚಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 

ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಎಲ್ಲಾ 8 ಮಂದಿ ಆರೋಪಿಗಳಾದ ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್ ಹಾಗೂ ಭಾಸ್ಕರ ಎಂಬವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪಂಚಾಯಿತಿಗೆಗೆ ಬಂದ ವೇಳೆ ತಂಡದಿಂದ ಮಾರಣಾಂತಿಕ ಹಲ್ಲೆಗೊಳಗಾದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು Rating: 5 Reviewed By: karavali Times
Scroll to Top