ವಿಟ್ಲ ಮನೆ ಕಳವು ಪ್ರಕರಣ ಬೇಧಿಸಿದ ಪೊಲೀಸರು : ಮನೆ ಕೆಲಸದಾಕೆ ಹಾಗೂ ಆಕೆಯ ಪತಿಯೇ ಆರೋಪಿಗಳು - Karavali Times ವಿಟ್ಲ ಮನೆ ಕಳವು ಪ್ರಕರಣ ಬೇಧಿಸಿದ ಪೊಲೀಸರು : ಮನೆ ಕೆಲಸದಾಕೆ ಹಾಗೂ ಆಕೆಯ ಪತಿಯೇ ಆರೋಪಿಗಳು - Karavali Times

728x90

19 July 2022

ವಿಟ್ಲ ಮನೆ ಕಳವು ಪ್ರಕರಣ ಬೇಧಿಸಿದ ಪೊಲೀಸರು : ಮನೆ ಕೆಲಸದಾಕೆ ಹಾಗೂ ಆಕೆಯ ಪತಿಯೇ ಆರೋಪಿಗಳು

ಬಂಟ್ವಾಳ, ಜುಲೈ 19, 2022 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ದಂಬೆತಾರು ನಿವಾಸಿ ದೇವಣ್ಣ ನಾಯಕ್ ಅವರ ಪುತ್ರ ವಿನಯಚಂದ್ರ ನಾಯಕ್ ಅವರ ಮನೆಯಲ್ಲಿ  ಜೂನ್ 6 ರಂದು ನಡೆದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸೊತ್ತುಗಳ ಸಹಿತ ಆರೋಪಿಗಳನ್ನು ಬಂಂಧಿಸುವಲ್ಲಿ ಸಫಲರಾಗಿದ್ದಾರೆ. 

ಬಂಧಿತ ಆರೋಪಿಗಳನ್ನು ವಿನಯಚಂದ್ರ ನಾಯಕ್ ಅವರ ಮನೆಯಲ್ಲಿ ಕೂಲಿ ಕೆಲಸಕ್ಕಿದ್ದ ಪುತ್ತೂರು ತಾಲೂಕು, ಸರ್ವೆ ಗ್ರಾಮದ ಬಾವಿಕಟ್ಟೆ ನಿವಾಸಿ ಶ್ರೀಮತಿ ಸುಮತಿ ಅಲಿಯಾಸ್ ಸುಮ (25) ಹಾಗೂ ಆಕೆಯ ಪತಿ ಪ್ರಮೋದ್ (26) ಎಂದು ಹೆಸರಿಸಲಾಗಿದೆ. 

ಕಳೆದ ಜೂನ್ 8 ರಂದು ವಿನಯಚಂದ್ರ ನಾಯಕ್ ಅವರ ಮನೆಯ ಬೆಡ್ ರೂಮಿನ ಕಪಾಟಿನಲ್ಲಿದ್ದ ಸುಮಾರು 1.48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಾದ ಚಿನ್ನದ ಬ್ರಾಸ್ ಲೈಟ್, ಚಿನ್ನದ ಲಕ್ಷ್ಮಿ ಚೈನ್, ಚಿನ್ನದ ಪದಕ ಸಹಿತ ಚೈನು, ಚಿನ್ನದ ಲಕ್ಷ್ಮಿ ಪದಕ ಸಹಿತ ಚೈನ್, 3 ಚಿನ್ನದ ಉಂಗುರಗಳ ಸಹಿತ ಒಟ್ಟು 98 ಗ್ರಾಂ ಚಿನ್ನಾಭರಣಗಳು ಕಳವಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪ್ರಕರಣದ ತನಿಖೆಯನ್ನು ಜಿಲ್ಲಾ ಎಸ್ಪಿ ರಿಷಿಕೇಶ್ ಭಗವಾನ್ ಸೋನಾವಣೆ ಅವರ ನಿರ್ದೇಶನದಂತೆ ಹಾಗೂ ಜಿಲ್ಲಾ ಎಡಿಶನಲ್ ಎಸ್ಪಿ ಕುಮಾರ ಚಂದ್ರ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೊರಟ್ ಅವರ ಮಾರ್ಗದರ್ಶನದಲ್ಲಿ ವಿಟ್ಲ ಪೆÇಲೀಸ್ ಠಾಣಾ ಇನ್ಸ್‍ಪೆಕ್ಟರ್ ನಾಗರಾಜ್ ಎಚ್ ಇ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿ ಮನೆಕೆಲಸದಾಕೆಯೇ ಕಳವು ಪ್ರಕರಣದಲ್ಲಿ ಆರೋಪಿ ಎಂಬುದನ್ನು ಬೇಧಿಸಲಾಗಿದೆ. 

ಆರೋಪಿ ದಂಪತಿಯನ್ನು ಬಂಧಿಸಿರುವ ಪೊಲೀಸರು ಕಳವಾಗಿದ್ದ 98 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಿಟ್ಲ ಪೆÇಲೀಸ್ ಠಾಣಾ ಎಸ್ಸೈ ಸಂದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಟಿ, ಎಚ್ ಸಿ ಗಳಾದ ಜಯರಾಮ ಕೆ ಟಿ, ರಕ್ಷಿತ್, ಕರುಣಾಕರ, ಪಿಸಿ ಗಳಾದ ಹೇಮರಾಜ್, ಸತೀಶ್, ಮನೋಜ್ ಕುಮಾರ್, ಮಹಿಳಾ ಪಿಸಿ ಸವಿತಾ ಅವರು ಪಾಲ್ಗೊಂಡಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ವಿಟ್ಲ ಮನೆ ಕಳವು ಪ್ರಕರಣ ಬೇಧಿಸಿದ ಪೊಲೀಸರು : ಮನೆ ಕೆಲಸದಾಕೆ ಹಾಗೂ ಆಕೆಯ ಪತಿಯೇ ಆರೋಪಿಗಳು Rating: 5 Reviewed By: karavali Times
Scroll to Top