ಅಕ್ಷರ ದಾಸೋಹ ನೌಕರರ ಅಮಾನವೀಯ ಬಿಡುಗಡೆ : ಸಿಐಟಿಯು ಆಕ್ರೋಶ - Karavali Times ಅಕ್ಷರ ದಾಸೋಹ ನೌಕರರ ಅಮಾನವೀಯ ಬಿಡುಗಡೆ : ಸಿಐಟಿಯು ಆಕ್ರೋಶ - Karavali Times

728x90

16 August 2022

ಅಕ್ಷರ ದಾಸೋಹ ನೌಕರರ ಅಮಾನವೀಯ ಬಿಡುಗಡೆ : ಸಿಐಟಿಯು ಆಕ್ರೋಶ

ಬಂಟ್ವಾಳ, ಆಗಸ್ಟ್ 16, 2022 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮ ಖಂಡಿಸಿ ಹಾಗೂ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರ ಮೂಲಕ ಮಂಗಳವಾರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮಧ್ಯಾಹ್ನದ ಬಿಸಿಯೂಟ ಯೋಜನೆಯು ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಿ ತಡೆಗಟ್ಟಲು ಶಿಕ್ಷಣ ಇಲಾಖೆಯ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ  ತಮ್ಮ ಕರ್ತವ್ಯ ನಿರ್ವಹಿಸಿಕೊಂಡು ಬಂದಿರುವ ಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ  ಬಡ ಮಹಿಳೆಯರನ್ನು ನಿವೃತ್ತಿ  ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮವನ್ನು  ಖಂಡಿಸಲಾಯಿತು. 

60 ವರ್ಷದ ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡಿಗಂಟು ನೀಡಿ ಗೌರವಯುತವಾಗಿ ಬಿಡುಗಡೆ ಮಾಡಬೇಕು, ಮಾರ್ಚ್ 31, 2022 ಕ್ಕೆ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ ಎಪ್ರಿಲ್ 10, 2022ಕ್ಕೆ ಮರು ಆದೇಶ  ನೀಡಬೇಕು, ಬಜೆಟಿನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಳ ಮಾಡಿದ ಸಾವಿರ ರೂಪಾಯಿ ವೇತನವನ್ನು 2022 ರ ಜನವರಿಯಿಂದ ಅನ್ವಯವಾಗುವಂತೆ ಜಾರಿ ಮಾಡಬೇಕು, ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು, ಖಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಅವರನ್ನು ಕಾರ್ಮಿಕರೆಂದು ಗುರುತಿಸಬೇಕು, ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು, ನಮ್ಮ ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಶಿಫಾರಸ್ಸಿನಂತೆ 6 ಸಾವಿರ ರೂಪಾಯಿ ಮತ್ತು 5 ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು, ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಟ್ಟಿಕೊಡಬೇಕು, ಎಲ್ಲರಿಗೂ ಅನ್ವಯವಾಗದೇ ಇರುವ ಮನ್-ಧನ್ ಯೋಜನೆ ಮಾಡಿಸಲು ಇಲಾಖೆಯಿಂದ ಒತ್ತಾಯಿಸಬಾರದು, ಶಾಲಾ ಅವಧಿಯ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು, ಬಿಸಿಯೂಟ ನೌಕರರಿಗೆ ಖಾಯಂ ಶಾಸನಾತ್ಮಕ ಸವಲತ್ತುಗಳನ್ನು ಜಾರಿ ಮಾಡಬೇಕು, ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಕಿನೊಳಗೆ ವೇತನ ಪಾವತಿಯಾಗಬೇಕು, ಬಿಸಿಯೂಟ ನೌಕರರನ್ನು ನೇರವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ಮೇಲ್ವಿಚಾರಣೆ ನಡೆಸಬೇಕು, ಪ್ರತಿ ಶಾಲೆಯಲ್ಲಿ  ಕನಿಷ್ಟ 2 ಜನ ಅಡುಗೆಯವರು ಇರಲೇಬೇಕು ಎಂಇತ್ಯಾದಿ ಬೇಡಿಕೆಗಳನ್ನು ಸರಕಾರಕ್ಕೆ ಸಲ್ಲಿಸಲಾಯಿತು. 

ನಿಯೋಗದಲ್ಲಿ ಅಕ್ಷರ ದಾಸೋಹ ಸಂಘದ ಅಧ್ಯಕ್ಷೆ ವಿನಯ ನಡುಮೊಗರು, ಸಿಐಟಿಯುನ ಕಾರ್ಯದರ್ಶಿ ರಾಮಣ್ಣ ವಿಟ್ಲ, ಕೃಷ್ಣಪ್ಪ ಪುದ್ದೋಟ್ಟು, ಅಕ್ಷರ ದಾಸೋಹ ನೌಕರರಾದ ಬೇಬಿ, ಬೆನ್ನಿ ವೇಗಸ್, ಕಲ್ಯಾಣಿ , ಲತಾ, ಮೀನಾಕ್ಷಿ, ಮೇರಿ ವಾಸ್, ವಾಣಿ, ಜಯಂತಿ ಮೊದಲಾದವರು ಇದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ಷರ ದಾಸೋಹ ನೌಕರರ ಅಮಾನವೀಯ ಬಿಡುಗಡೆ : ಸಿಐಟಿಯು ಆಕ್ರೋಶ Rating: 5 Reviewed By: karavali Times
Scroll to Top