ಬಂಟ್ವಾಳ ಕುಲಾಲ ಸೇವಾದಳದ ಚೈತನ್ಯ ನಿರಂತರ ಕಾರ್ಯಾಗಾರದ ಆಮಂತ್ರಣ ಪತ್ರಿಕೆ ಬಿಡುಗಡೆ - Karavali Times ಬಂಟ್ವಾಳ ಕುಲಾಲ ಸೇವಾದಳದ ಚೈತನ್ಯ ನಿರಂತರ ಕಾರ್ಯಾಗಾರದ ಆಮಂತ್ರಣ ಪತ್ರಿಕೆ ಬಿಡುಗಡೆ - Karavali Times

728x90

15 January 2023

ಬಂಟ್ವಾಳ ಕುಲಾಲ ಸೇವಾದಳದ ಚೈತನ್ಯ ನಿರಂತರ ಕಾರ್ಯಾಗಾರದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ, ಜನವರಿ 15, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಕುಲಾಲ ಸೇವಾದಳದ ಚೈತನ್ಯ ನಿರಂತರ ಕಾರ್ಯಾಗಾರ ಇನ್ನಷ್ಟು ಉತ್ತಮವಾಗಿ ಮೂಡಿಬರಲಿ. ತಾಲೂಕಿನ ಎಲ್ಲ ಕುಲಾಲ ಸಮುದಾಯದವರು ಈ ಉಚಿತ ನಿರಂತರ ಕಾರ್ಯಾಗಾರದ ಪ್ರಯೋಜನ ಪಡೆಯಲಿ ಎಂದು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ನಾರಾಯಣ ಸಿ ಪೆರ್ನೆ ಹೇಳಿದರು. 


ಬಿ ಸಿ ರೋಡು-ಪೆÇಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ಭಾನುವಾರ (ಜ 15) ನಡೆದ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾ ದಳದ ಚೈತನ್ಯ ನಿರಂತರ ಕಾರ್ಯಕ್ರಮದ ಫೆಬ್ರವರಿ 12ರಿಂದ ನಡೆಯುವ ಎರಡನೇ ಹಂತದ ಕಾರ್ಯಾಗಾರದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು.


ಎರಡನೇ ಹಂತದ ಕಾರ್ಯಾಗಾರದಲ್ಲಿ  ಹಿರಿಯ ಕಲಾವಿದ ಎಚ್ಕೆ ನೈನಾಡು, ಯಕ್ಷಗಾನದ ಕಲಾವಿದ ಅಶ್ವಥ್ ಕುಲಾಲ್ ಜನಾಡಿ, ತುಳು ಲಿಪಿ ಶಿಕ್ಷಕ ಸುದರ್ಶನ್ ಸುರತ್ಕಲ್, ಪತ್ರಕರ್ತ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಇದೇ ಸಂದರ್ಭ ಕಳೆದ ಮೂರು ತಿಂಗಳಿನಿಂದ ತರಬೇತಿ ನೀಡುತ್ತಿರುವ ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಮತ್ತು ಡ್ಯಾನ್ಸ್ ಕೋರಿಯೋಗ್ರಾಫರ್ ಮಹೇಶ್ ಕುಲಾಲ್ ಕಡೇಶ್ವಾಲ್ಯರವರಿಗೆ ಗುರು ನಮನ ಕಾರ್ಯಕ್ರಮ ನಡೆಯಲಿದೆ.

ಸೇವಾದಳಪತಿ ಯಾದವ ಅಗ್ರಬೈಲು, ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೇಶವ ಮಾಸ್ತರ್, ಕೋಶಾಧಿಕಾರಿ ನಾಗೇಶ್ ಬಾಳೆಹಿತ್ಲು, ಜತೆ ಕಾರ್ಯದರ್ಶಿಗಳಾದ ಜಯಗಣೇಶ್, ಮೀನಾಕ್ಷಿ ಪದ್ಮನಾಭ, ಸದಸ್ಯರುಗಳಾದ ಕ್ರಷ್ಣಪ್ಪ ಬಿ, ಬೋಜ ಸಾಲ್ಯಾನ್, ಮಾದವ ಬಿ ಸಿ ರೋಡು, ಮನೋಹರ ನೇರಂಬೋಳು, ರಾಧಾಕೃಷ್ಣ ಬಂಟ್ವಾಳ, ರಮೇಶ್ ಸಾಲ್ಯಾನ್, ಯೋಗೀಶ್ ಮಿತ್ತಬೈಲು, ಗಣೇಶ್ ಮರ್ದೊಳಿ, ಮಚ್ಚೇಂದ್ರ ಸಾಲ್ಯಾನ್, ಪ್ರೇಮಾ ಪೆÇಸಳ್ಳಿ, ಜಲಜಾಕ್ಷಿ, ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ಲಿಂಗಪ್ಪ, ಸೇವಾದಳದ ಸದಸ್ಯರುಗಳಾದ ಕಿಶೋರ್ ರಾಜೀವಪಲ್ಕೆ, ದೇವದಾಸ ಅಗ್ರಬೈಲು ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಕುಲಾಲ ಸೇವಾದಳದ ಚೈತನ್ಯ ನಿರಂತರ ಕಾರ್ಯಾಗಾರದ ಆಮಂತ್ರಣ ಪತ್ರಿಕೆ ಬಿಡುಗಡೆ Rating: 5 Reviewed By: karavali Times
Scroll to Top