ಮಾಣಿ ಸಂತೆ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಮಾಣಿ ಸಂತೆ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

14 February 2023

ಮಾಣಿ ಸಂತೆ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಫೆಬ್ರವರಿ 15, 2023 (ಕರಾವಳಿ ಟೈಮ್ಸ್) : ಮಾಣಿ ಸಂತೆ ಮಾರುಕಟ್ಟೆ ಬಳಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳವಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕಡೆಶ್ವಾಲ್ಯ ಗ್ರಾಮದ ಪೆರ್ಲಾಪು-ಚಿನ್ನಯ್ಯ ಕಟ್ಟೆ ನಿವಾಸಿ ಮನೀಶ್ ಆಚಾರ್ಯ ಅವರು ಫೆ 13 ರಂದು ಬೆಳಿಗ್ಗೆ 6.30 ಗಂಟೆಗೆ ತನ್ನ ಮೋಟಾರು ಸೈಕಲಿನಲ್ಲಿ ಮನೆಯಿಂದ ಹೊರಟು ಮಾಣಿ ಸಂತೆ ಮಾರುಕಟ್ಟೆ ಬಳಿ ಬೆಳಿಗ್ಗೆ 6:40 ರ ವೇಳೆಗೆ ನಿಲ್ಲಿಸಿ ಮಂಗಳೂರಿಗೆ ಹೋಗಿ ರಾತ್ರಿ 8.30 ರ ವೇಳೆಗೆ ಮರಳಿ ಬಂದು ನೋಡಿದಾಗ ದ್ವಿಚಕ್ರ ವಾಹನ ಕಾಣೆಯಾಗಿದೆ. 

ಕಳವಾದ ಮೋಟಾರು ಸೈಕಲ್ ನೋಂದಣಿ ಸಂಖ್ಯೆ ಕೆಎ03 ಎಚ್ ಎಚ್ 8001 ಆಗಿದ್ದು, ಅಂದಾಜು ಮೌಲ್ಯ 30 ಸಾವಿರ ರೂಪಾಯಿ ಎಂದು ಮನೀಶ್ ಆಚಾರ್ಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾಣಿ ಸಂತೆ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top