ಪಾಣಾಜೆ : ಅಕ್ರಮ ಜಾನುವಾರು ಸಾಗಾಟ ಬೇಧಿಸಿ ಆರೋಪಿಗಳ ದಸ್ತಗಿರಿ ಮಾಡಿದ ಪುತ್ತೂರು ಗ್ರಾಮಾಂತರ ಪೊಲೀಸ್ - Karavali Times ಪಾಣಾಜೆ : ಅಕ್ರಮ ಜಾನುವಾರು ಸಾಗಾಟ ಬೇಧಿಸಿ ಆರೋಪಿಗಳ ದಸ್ತಗಿರಿ ಮಾಡಿದ ಪುತ್ತೂರು ಗ್ರಾಮಾಂತರ ಪೊಲೀಸ್ - Karavali Times

728x90

12 February 2023

ಪಾಣಾಜೆ : ಅಕ್ರಮ ಜಾನುವಾರು ಸಾಗಾಟ ಬೇಧಿಸಿ ಆರೋಪಿಗಳ ದಸ್ತಗಿರಿ ಮಾಡಿದ ಪುತ್ತೂರು ಗ್ರಾಮಾಂತರ ಪೊಲೀಸ್

ಪುತ್ತೂರು, ಫೆಬ್ರವರಿ 13, 2023 (ಕರಾವಳಿ ಟೈಮ್ಸ್) : ತಾಲೂಕಿನ ಪಾಣಾಜೆ ಗ್ರಾಮದ ನೆಲ್ಲಿತ್ತಿಮಾರ್ ಎಂಬಲ್ಲಿ ಅಶೋಕ್ ಲೇಲ್ಯಾಂಡ್ ಮಿನಿ ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಪುತ್ತೂರು ಗ್ರಾಮಾಂತರ ಪಿಎಸ್ಸೈ ಶ್ರೀನಾಥ ರೆಡ್ಡಿ ನೇತೃತ್ವದ ಪೊಲೀಸರು ಜಾನುವಾರು ಸಹಿತ ಆರೋಪಿಗಳನ್ನು ಭಾನುವಾರ ಸಂಜೆ ದಸ್ತಗಿರಿ ಮಾಡಿದ್ದಾರೆ. 

ಬಂಧಿತ ಆರೋಪಿಗಳನ್ನು ವಿಲ್ಲಿ ಲೂಯಿಸ್ ಡಿ’ಸೋಜಾ, ಸಂತೋಷ್ ಡಿ’ಸೋಜಾ, ಸಿಲ್ವೆಸ್ಟರ್ ಡಿ’ಸೋಜಾ ಎಂದು ಹೆಸರಿಸಲಾಗಿದೆ. ಆರೋಪಿಗಳು ಸಾಗಾಟ ಮಾಡುತ್ತಿದ್ದ ಒಂದು ಹಸು ಹಾಗೂ ಗಂಡು ಕರುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 13/2023 ಕಲಂ 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪಾಣಾಜೆ : ಅಕ್ರಮ ಜಾನುವಾರು ಸಾಗಾಟ ಬೇಧಿಸಿ ಆರೋಪಿಗಳ ದಸ್ತಗಿರಿ ಮಾಡಿದ ಪುತ್ತೂರು ಗ್ರಾಮಾಂತರ ಪೊಲೀಸ್ Rating: 5 Reviewed By: karavali Times
Scroll to Top