ಅಡ್ಯನಡ್ಕ : ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಪ್ರಚೋದನಕಾರಿ ಭಾಷಣ ಆರೋಪ, ವಿಟ್ಲ ಠಾಣೆಯಲ್ಲಿ ದೂರು ದಾಖಲು - Karavali Times ಅಡ್ಯನಡ್ಕ : ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಪ್ರಚೋದನಕಾರಿ ಭಾಷಣ ಆರೋಪ, ವಿಟ್ಲ ಠಾಣೆಯಲ್ಲಿ ದೂರು ದಾಖಲು - Karavali Times

728x90

19 February 2023

ಅಡ್ಯನಡ್ಕ : ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಪ್ರಚೋದನಕಾರಿ ಭಾಷಣ ಆರೋಪ, ವಿಟ್ಲ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ, ಫೆಬ್ರವರಿ 19, 2023 (ಕರಾವಳಿ ಟೈಮ್ಸ್) : ತಾಲೂಕಿನ ಕೇಪು ಗ್ರಾಮದ ಅಡ್ಯನಡ್ಕದ ನಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಎಸೋಸಿಯೇಶನ್ ವತಿಯಿಂದ ಇಲ್ಲಿನ ರಾಜಮಜಲ್ ಖಾಸಗಿ ಸಭಾಂಗಣದಲ್ಲಿ ಶನಿವಾರ ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಕೇಪು ಗ್ರಾಮದ ನೆಕ್ಕರೆ ನಿವಾಸಿ ಮಾಧವ ಮೂಲ್ಯ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಜನತಾ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯ ಟಿ ಆರ್ ನಾಯಕ್, ರಫೀಕ್ ಮಾಸ್ಟರ್ ಆತೂರು ಹಾಗೂ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಶನ್ ಸಂಘಟಕಾರರ ವಿರುದ್ದ ಅಪರಾಧ ಕ್ರಮಾಂಕ 23/2023 ಕಲಂ 505(2) ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಡ್ಯನಡ್ಕ : ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ಪ್ರಚೋದನಕಾರಿ ಭಾಷಣ ಆರೋಪ, ವಿಟ್ಲ ಠಾಣೆಯಲ್ಲಿ ದೂರು ದಾಖಲು Rating: 5 Reviewed By: karavali Times
Scroll to Top