ವಕೀಲರ ಸಂಘದ ಸಹಭಾಗಿತ್ವದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ - Karavali Times ವಕೀಲರ ಸಂಘದ ಸಹಭಾಗಿತ್ವದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ - Karavali Times

728x90

12 March 2023

ವಕೀಲರ ಸಂಘದ ಸಹಭಾಗಿತ್ವದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ, ಮಾರ್ಚ್ 13, 2023 (ಕರಾವಳಿ ಟೈಮ್ಸ್) : ವಕೀಲರ ಸಂಘ (ರಿ) ಬಂಟ್ವಾಳ, ದ ಕ ಜಿಲ್ಲಾ ಕಾನೂನು ವೇದಿಕೆ (ರಿ), ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಬಂಟ್ವಾಳ ಜೆ ಎಂ ಎಫ್ ಸಿ ನ್ಯಾಯಾಲಯದ ಆವರಣದಲ್ಲಿ ನಡೆಯಿತು. 

ಕ್ರಾರ್ಯಕ್ರಮವನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾದೀಶೆ ಶ್ರೀಮತಿ ಭಾಗ್ಯಮ್ಮ ಉದ್ದಾಟಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಮೋಹನ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರು ಕೆ ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಸೈಂಟಿಪಿಕ್ ಆಪಿಸರ್ ಆಫ್ ಸೆಂಟ್ರಲ್ ರಿಸರ್ಚ್ ಲ್ಯಾಬೇರೇಟರಿಯ ಪ್ರೊಫೆಸರ್ ಪ್ರಿನ್ಸಿಪಾಲ್ ಡಾ ಸುಚೇತ ಜೆ ಶೆಟ್ಟಿ ಮಹಿಳಾ ಸಬಲೀಕರಣದ ಬಗ್ಗೆ ವಿವರಿಸಿದರು. 

ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ತಳವಾರ್, ಹೆಚ್ಚುವರಿ ಸಿವಿಲ್ ಹಾಗೂ ಜೆ ಎಂ ಎಫ್ ಸಿ ನ್ಯಾಯಾಧೀಶ ಕೃಷ್ಣ ಮೂರ್ತಿ, ದ.ಕ ಜಿಲ್ಲಾ ಕಾನೂನು ವೇದಿಕೆಯ ಉಪಾದ್ಯಕ್ಷ ಉಮೇಶ್ ಕುಮಾರ್  ವೈ ಮಾತನಾಡಿದರು. ಇದೇ ವೇಳೆ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಮೂವರು ಮಹಿಳಾ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು

ಹಿರಿಯ ವಕೀಲರಾದ ಎಂ ಅಶ್ವನಿ ಕುಮಾರ್ ರೈ, ಪಿ ಸಿ ಸಾಲ್ಯಾನ್, ಹಾತಿಮ್ ಅಹಮದ್, ಮೋಹನ್ ಕುಮಾರ್ ಕಡೇಶಿವಾಲ್ಯ, ಎಚ್ ಸತೀಶ್ ರಾವ್, ಮಹಮ್ಮದ್ ಅಶ್ರಫ್, ಆಶಾ ಪಿ ರೈ, ಸತೀಶ್ ಬಿ, ಮಹಮ್ಮದ್ ಕಬೀರ್,  ಮಲಿಕ್ ಅನ್ಸಾರ್ ಕರಾಯ, ತುಳಸೀದಾಸ್, ಆರ್ ವಿನೋದ, ಶುಭ, ಅಭಿನಯ, ಗಾಯತ್ರಿ ಮೊದಲಾದವರು ಭಾಗವಹಿಸಿದ್ದರು. 

ದ ಕ ಜಿಲ್ಲಾ ಕಾನೂನು ವೇದಿಕೆ (ರಿ) ಬಂಟ್ವಾಳ ತಾಲೂಕು ಘಟಕಾದ್ಯಕ್ಷ ಸುರೇಶ್ ಪೂಜಾರಿ ಸ್ವಾಗತಿಸಿ, ಪ್ರಸ್ತಾವನೆಗೈದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವೀರೇಂದ್ರ ಎಂ ಸಿದ್ದಕಟ್ಟೆ ವಂದಿಸಿ, ಚಂದ್ರಶೇಖರ್ ರಾವ್ ಪುಂಚಮೆ ಕಾರ್ಯಕ್ರಮ ನಿರೂಪಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ವಕೀಲರ ಸಂಘದ ಸಹಭಾಗಿತ್ವದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ Rating: 5 Reviewed By: karavali Times
Scroll to Top