![]() |
ಪೊಲೀಸ್ ಕಮಿಷನರ್ ಡಾ ಹರ್ಷ |
ಮಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ವೈರಸ್ ಹಿಮ್ಮಟ್ಟಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯರಾತ್ರಿಯಿಂದಲೇ ಇಡೀ 21 ದಿನಗಳ ಕಾಲ ದೇಶದ ಜನತೆಗೆ ಗೃಹಬಂಧನ ಘೋಷಿಸುತ್ತಲೇ ಜನ ಅಗತ್ಯ ಸೇವೆಗಳ ಬಗ್ಗೆ ಚಿಂತಿತರಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಂಗಳೂರು ಪೊಲೀಸ್ ಕಮಿಷನರ್ ಡಾ ಹರ್ಷ ಅವರು ಜಿಲ್ಲೆಯ ಜನತೆಗೆ ಅಭಯ ನೀಡಿದ್ದಾರೆ. ಲಾಕ್ ಡೌನ್ ಇದ್ದರೂ ಜನ ಅಗತ್ಯ ಸೇವೆಗಳನ್ನು ಪಡೆದುಕೊಳ್ಳಲು ಯಾವುದೇ ಅಡ್ಡಿ ಇಲ್ಲ. ಪ್ರತಿದಿನ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12ರವರೆಗೆ ಜನ ತಮ್ಮ ಅಗತ್ಯ ಸೇವೆಗಳನ್ನು ನಿರ್ಬಂಧಪೂರ್ವಕವಾಗಿಯೇ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಈ ಬಗ್ಗೆ ಜನ ಯಾವುದೇ ಆತಂಕಪಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
0 comments:
Post a Comment