ಬೆಂಗಳೂರು (ಕರಾವಳಿ ಟೈಮ್ಸ್) : ದೇಶಾದ್ಯಂತ ಹರಡುತ್ತಿರುವ ಕೊರೋನಾ ವೈರಸ್ ತಡೆಗಟ್ಟಲು ಕೇಂದ್ರ ಸರಕಾರ ವಿಧಿಸಿರುವ 21 ದಿನಗಳ ಲಾಕ್ಡೌನ್ ಆದೇಶ ಹೊರಡಿಸಿ, ಕಟ್ಟುನಿಟ್ಟಿನ ಪಾಲನೆಗೆ ಸೂಚಿಸಿದ್ದರೂ ಜನ ಎಚ್ಚೆತ್ತುಕೊಳ್ಳದೆ ಎಲ್ಲೆಂದರಲ್ಲಿ ಸಂಚರಿಸುತ್ತಿರುವುದು ಸರಕಾರದ ನಿದ್ದೆಗೆಡಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.
ಲಾಕ್ಡೌನ್ ಉಲ್ಲಂಘಿಸುವ ವಾಹನವನ್ನು ಲಾಕ್ ಮಾಡಲು ರಾಜ್ಯ ಸರಕಾರ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ. ನಿನ್ನೆಯಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಅಚ್ಚರಿಯೆಂದರೆ ನಿನ್ನೆ ಒಂದೇ ದಿನ 900 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಕಟ್ಟುನಿಟ್ಟಾಗಿ ಲಾಕ್ಡೌನ್ ಜಾರಿಗೆ ತಂದರೂ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರು ಗತಿಯಲ್ಲೇ ಇದೆ. ದೇಶಾದ್ಯಂತ ಕೊರೋನಾ ವೈರಸ್ ಸೋಂಕು ತಗುಲಿದವರ ಸಂಖ್ಯೆ 1,024ಕ್ಕೆ ಮುಟ್ಟಿದೆ ಎಂದು ಇತ್ತೀಚಿನ ವರದಿಗಳು ಹೇಳುತ್ತಿವೆ.
0 comments:
Post a Comment