ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಟಾಡಿ ಗ್ರಾಮದ ಕಲಾಯಿ ಎಂಬಲ್ಲಿ ಕರ್ತವ್ಯ ನಿರತ ಆಶಾ ಕಾರ್ಯಕರ್ತೆಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಸ್ಥಳೀಯ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ್ ಎಂಬವರ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ್ ಅವರು ಎ. 1 ರಂದು ಸಂಜೆ ತಾನು ಫೀಲ್ಡ್ನಲ್ಲಿದ್ದ ವೇಳೆ ದೂರವಾಣಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾರೆ ಎಂದು ಆಶಾ ಕಾರ್ಯಕರ್ತೆ ಪೆÇಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬಂದವರ ಹೋಮ್ ಕ್ವಾರಂಟೈನ್ ಕುರಿತು ಆಶಾ ಕಾರ್ಯಕರ್ತೆಯರಿಗೆ ವಿಶೇಷ ಜವಾಬ್ದಾರಿ ನೀಡಲಾಗಿದ್ದು, ಆರೋಪಿಗಳ ಸಂಬಂಧಿ ವಿದೇಶದಿಂದ ಬಂದಿದ್ದು, ಈ ಕುರಿತು ಆಶಾ ಕಾರ್ಯಕರ್ತೆ ವಿಚಾರಣೆ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಆರೋಪಿಗಳು ಬೆದರಿಕೆಯೊಡ್ಡಿದ್ದಾರೆ.
0 comments:
Post a Comment