ಬಂಟ್ವಾಳ (ಕರಾವಳಿ ಟೈಮ್ಸ್) : ಲಾಕ್ಡೌನ್ ಉಲ್ಲಂಘನೆ ಮಾಡುವವರ ವಿರುದ್ದ ಕಾರ್ಯಾಚರಣೆ ನಡೆಸಿದ ಪೂಂಜಾಲಕಟ್ಟೆ ಠಾಣಾ ಎಸ್ಸೈ ಸೌಮ್ಯ ಅವರು 12 ಬೈಕ್, 1 ಅಟೋ ಹಾಗೂ 1 ಪಿಕಪ್ ವಾಹನವನ್ನು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾಡಳಿತದ ಲಾಕ್ಡೌನ್ ಆದೇಶವನ್ನು ಮೀರಿ ಯುವಕರು ದ್ವಿಚಕ್ರ ವಾಹನಗಳಲ್ಲಿ ರಸ್ತೆಗಳಲ್ಲಿ ತಿರುಗಾಟ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ಇದೀಗ ಉಗ್ರ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಂತೂ ಪೊಲೀಸರು ಗಸ್ತು ನಡೆಸುತ್ತಿಲ್ಲ ಎಂಬ ಭಂಡ ಧೈರ್ಯದಿಂದ ಯುವಕರು ವ್ಯಾಪಕವಾಗಿ ವಾಹನಗಳ ಮೂಲಕ ತಿರುಗಾಟ ನಡೆಸುವ ಪ್ರಕರಣಗಳು ಜಾಸ್ತಿಯಾಗಿದ್ದು, ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪೂಂಜಾಲಕಟ್ಟೆ ಎಸ್ಸೈ ಅವರು ಯುವಕರಿಗೆ ಬಿಸಿ ಮುಟ್ಟಿಸಿದ್ದಾರೆ.
0 comments:
Post a Comment