ಗೃಹ ಬಳಕೆಯ ವಿದ್ಯುತ್ ಬಿಲ್ ಮನ್ನಾ ಮಾಡದಿದ್ದರೆ ಬೀದಿಗಿಳಿದು ಪ್ರತಿಭಟನೆ : ಮಾಜಿ ಸಚಿವ ರಮಾನಾಥ ರೈ ಎಚ್ಚರಿಕೆ - Karavali Times ಗೃಹ ಬಳಕೆಯ ವಿದ್ಯುತ್ ಬಿಲ್ ಮನ್ನಾ ಮಾಡದಿದ್ದರೆ ಬೀದಿಗಿಳಿದು ಪ್ರತಿಭಟನೆ : ಮಾಜಿ ಸಚಿವ ರಮಾನಾಥ ರೈ ಎಚ್ಚರಿಕೆ - Karavali Times

728x90

12 May 2020

ಗೃಹ ಬಳಕೆಯ ವಿದ್ಯುತ್ ಬಿಲ್ ಮನ್ನಾ ಮಾಡದಿದ್ದರೆ ಬೀದಿಗಿಳಿದು ಪ್ರತಿಭಟನೆ : ಮಾಜಿ ಸಚಿವ ರಮಾನಾಥ ರೈ ಎಚ್ಚರಿಕೆ



ಬಂಟ್ವಾಳ (ಕರಾವಳಿ ಟೈಮ್ಸ್) : ಲಾಕ್‍ಡೌನ್ ಆರಂಭವಾದ ಬಳಿಕದ ಎರಡು ತಿಂಗಳ ವಿದ್ಯುತ್ ಬಿಲ್ ಸಂಪೂರ್ಣ ಮನ್ನಾ ಮಾಡದಿದ್ದಲ್ಲಿ ಗ್ರಾಹಕರ ಪರವಾಗಿ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಲಾಕ್‍ಡೌನ್ ಆರಂಭವಾದ ಬಳಿಕದ ಎರಡು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದರು. ಆದರೆ ಇದೀಗ ಮೆಸ್ಕಾಂ ಇಲಾಖೆ ಮೂರು ತಿಂಗಳ ವಿದ್ಯುತ್ ಬಿಲ್ಲನ್ನು ಒಂದೇ ಬಾರಿಗೆ ಗ್ರಾಹಕರ ಮನೆಗೆ ತಲುಪಿಸುವ ಮೂಲಕ ಜನವಿರೋಧಿಯಾಗಿ ವರ್ತಿಸಿದೆ. ಇದು ತೀವ್ರ ಖಂಡನೀಯವಾಗಿದೆ ಎಂದ ರಮಾನಾಥ ರೈ ತಕ್ಷಣ ಸರಕಾರ ಈ ಬಗ್ಗೆ ಮಧ್ಯಪ್ರವೇಶಿಸಿ ಗೃಹ ಬಳಕೆಯ ವಿದ್ಯುತ್ ಬಿಲ್ ಮನ್ನಾ ಮಾಡುವ ಕೆಲಸ ಮಾಡಬೇಕು. ಇಲ್ಲದಿದ್ದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. 
  • Blogger Comments
  • Facebook Comments

0 comments:

Post a Comment

Item Reviewed: ಗೃಹ ಬಳಕೆಯ ವಿದ್ಯುತ್ ಬಿಲ್ ಮನ್ನಾ ಮಾಡದಿದ್ದರೆ ಬೀದಿಗಿಳಿದು ಪ್ರತಿಭಟನೆ : ಮಾಜಿ ಸಚಿವ ರಮಾನಾಥ ರೈ ಎಚ್ಚರಿಕೆ Rating: 5 Reviewed By: karavali Times
Scroll to Top