ಬೆಂಗಳೂರು (ಕರಾವಳಿ ಟೈಮ್ಸ್) : ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡು, ಕೊರೊನಾ ಲಾಕ್ಡೌನ್ನಿಂದ ಊರಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗಳು ಇರುವ ಕಡೆಗಳಲ್ಲಿಯೇ ಪರೀಕ್ಷೆ ಬರೆಯುವ ಅವಕಾಶ ನೀಡಿ ಆದೇಶ ಹೊರಡಿಸಿದೆ.
ಈ ನಿಟ್ಟಿನಲ್ಲಿ ಹೆಚ್ಚುವರಿಯಾಗಿ 75 ಕೇಂದ್ರಗಳನ್ನು ಹೊಸದಾಗಿ ಗುರುತಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ತಾವು ಇರುವ ಹತ್ತಿರದ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದುದಾಗಿದೆ. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಎರಡು ದಿನಗಳ ಅವಕಾಶ ನೀಡಲಾಗಿದೆ. ಮೇ 20 ಸಂಜೆ 6 ಗಂಟೆಯಿಂದ ಮೇ 22ರ ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಿ ಕೇಂದ್ರ ಬದಲಾವಣೆ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಆದ್ಯತೆ ಮೇರೆಗೆ 3 ಆಯ್ಕೆ ಕೊಡಬೇಕು. ಈ ಮೂಲಕ ಪರೀಕ್ಷಾ ಕೇಂದ್ರದ ಲಭ್ಯತೆಯ ಆಧಾರದ ಮೇಲೆ ಪರೀಕ್ಷಾ ಪ್ರಾಧಿಕಾರವು ವಿದ್ಯಾರ್ಥಿಗಳಿಗೆ ಕೇಂದ್ರವನ್ನು ಹಂಚಿಕೆ ಮಾಡಲಿದೆ.
ಜುಲೈ 30, 31 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಜುಲೈ 30 ಜೀವಶಾಸ್ತ್ರ, ಗಣಿತ ಪರೀಕ್ಷೆ ಇದ್ದರೆ ಜುಲೈ 31 ರಂದು ಭೌತಶಾಸ್ತ್ರ, ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿವೆ. ಆಗಸ್ಟ್ 1ರಂದು ಹೊರನಾಡು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ.
0 comments:
Post a Comment