ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ 900 ಕುಟುಂಬಗಳಿಗೆ ಕನ್ಯಾನ ಪಂಚಾಯತ್ ವಠಾರದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ದಿನ ಬಳಕೆಯ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭ ಜಿ.ಪಂ. ಸದಸ್ಯ ಎಂ ಎಸ್ ಮುಹಮ್ಮದ್, ತಾ.ಪಂ. ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಗ್ರಾ ಪಂ ಅಧ್ಯಕ್ಷೆ ದೇವಕಿ, ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಸದಸ್ಯರುಗಳಾದ ಅಬ್ದುಲ್ ಮಜೀದ್, ಗಣೇಶ್ ಭಟ್, ಇಬ್ರಾಹಿಂ ಕೊಣಲೆ, ಅಬೂಬಕ್ಕರ್, ಮೊಯಿದು ಕುಂಞÂ, ಈಶ್ವರ್ ನಾಯ್ಕ, ಗಂಗಾಧರ ಕನ್ಯಾನ ಹಾಗೂ ಡಿ ಕೆ ಅಬ್ದುಲ್ ಖಾದರ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment