ಬಂಟ್ವಾಳ, ನ. 6, 2020 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಕಳೆದ ಹಲವು ವರ್ಷಗಳಿಂದ ಸಕ್ರಿಯ ಪತ್ರಕರ್ತನಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತ, ಕಲ್ಲಡ್ಕ ಸಮೀಪ ಅಮ್ಟೂರು-ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಕಳೆದೆ ಒಂದೆರಡು ತಿಂಗಳುಗಳಿಂದ ಅಸೌಖ್ಯಕ್ಕೀಡಾಗಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರವಷ್ಟೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮನೆಗೆ ಬಂದಿದ್ದರು ಎನ್ನಲಾಗಿದೆ.
ಬಂಟ್ವಾಳದಲ್ಲಿ ಕಾಲು ದಶಕಕ್ಕೂ ಅಧಿಕ ಕಾಲ ಪತ್ರಕರ್ತರಾಗಿ ದುಡಿದಿರುವ ಇವರು ಮುಂಗಾರು ಪತ್ರಿಕೆ ಸಹಿತ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಸುದೀರ್ಘ ಕಾಲ ಬಂಟ್ವಾಳದಿಂದ ಕನ್ನಡ ಜನಾಂತರಂಗ ಹಾಗೂ ಕರಾವಳಿ ಅಲೆ ಪತ್ರಿಕೆಗಳ ವರದಿಗಾರರಾಗಿ ಕಾರ್ಯನಿರ್ವಹಿಸಿ ಚಿರಪರಿಚಿತರಾಗಿದ್ದರು.
ಸಂತಾಪ
ಪತ್ರಕರ್ತ ಸೂರ್ಯನಾರಾಯಣ ಪೂವಳ ಅವರ ಅಕಾಲಿಕ ನಿಧನಕ್ಕೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್, ಮಾಜಿ ಸಚಿವ ಬಿ ರಮಾನಾಥ ರೈ, ಬಂಟ್ವಾಳ ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಸಹಿತ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
0 comments:
Post a Comment