ಬೆಂಗಳೂರು, ಸೆಪ್ಟೆಂಬರ್ 03, 2021 (ಕರಾವಳಿ ಟೈಮ್ಸ್) : ಈ ಬಾರಿಯ ಶೈಕ್ಷಣಿಕ ವರ್ಷದ ಅಂದರೆ 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ದಿನಾಂಕ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 20 ರವರೆಗೂ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥನಾರಾಯಣ ಹೇಳಿದ್ದಾರೆ.
ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ರೀತಿಯಲ್ಲಿ ಈ ಬಾರಿ ದಾಖಲಾತಿ ನೀಡಲಾಗುತ್ತಿದ್ದು, ಈ ತಿಂಗಳ 20ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದ 62 ಸರಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆ. 20ರ ಸಂಜೆ ಕಚೇರಿ ಅವಧಿವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.
ಪ್ರವೇಶಾವಧಿಯನ್ನು ವಿಸ್ತರಣೆ ಮಾಡುವಂತೆ ಎಲ್ಲ ಪಾಲಿಟೆಕ್ನಿಕ್ʼಗಳ ಪ್ರಾಂಶುಪಾಲರ ಕೋರಿಕೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದವರು ಹೇಳಿದ್ದಾರೆ.
0 comments:
Post a Comment