ಬಂಟ್ವಾಳ, ಫೆಬ್ರವರಿ 12, 2022 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ನೂತನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ನೇತೃತ್ವದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಫೆಬ್ರವರಿ 14 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬಿ ಸಿ ರೋಡಿನ ಕನ್ನಡ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಡಾ ವೀಣಾ ತೋಳ್ಪಾಡಿ ಬಿ ಸಿ ರೋಡು ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಸಾಹಿತ್ಯ ಮತ್ತು ಜನಸಾಮಾನ್ಯರು ಎಂಬ ವಿಷಯದಲ್ಲಿ ಉಪನ್ಯಾಸಗೈಯುವರು. ಮುಖ್ಯ ಅತಿಥಿಗಳಾಗಿ ಸ್ವರ್ಣೋದ್ಯಮಿ ಬಿ ನಾಗೇಂದ್ರ ಬಾಳಿಗಾ, ಹಿರಿಯ ನೋಟರಿ-ನ್ಯಾಯವಾದಿ ಎಂ ಅಶ್ವನಿ ಕುಮಾರ್ ರೈ, ಸಾಹಿತಿ ಸದಾನಂದ ಬಂಗೇರ ಭಾಗವಹಿಸುವರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಅಧ್ಯಕ್ಷತೆ ವಹಿಸುವರು ಎಂದು ಪರಿಷತ್ ಪ್ರಕಟಣೆ ತಿಳಿಸಿದೆ.
0 comments:
Post a Comment