ಮಂಗಳೂರು, ಸೆಪ್ಟೆಂಬರ್ 01, 2022 (ಕರಾವಳಿ ಟೈಮ್ಸ್) : ಮಂಗಳೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಸೆಪ್ಟೆಂಬರ್ 9 ರ ಅಪರಾಹ್ನ 3:30ಕ್ಕೆ ಬಲ್ಮಠದಲ್ಲಿರುವ ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನಡೆಯಲಿದೆ.
ಈ ಅದಾಲತಿನಲ್ಲಿ ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು, ತಕರಾರುಗಳನ್ನು ಪರಿಶೀಲಿಸಲಾಗುವುದು. ಸಾರ್ವಜನಿಕರು ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಪತ್ರಮುಖೇನ “ಅಂಚೆ ಅದಾಲತ್” ತಲೆಬರಹದಡಿಯಲ್ಲಿ ಸೆಪ್ಟೆಂಬರ್ 8ರೊಳಗೆ “ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ಅಂಚೆ ವಿಭಾಗ, ಬಲ್ಮಠ ಮಂಗಳೂರು 575002” ವಿಳಾಸಕ್ಕೆ ಅಥವಾ ದೂರುಗಳನ್ನು ವಾಟ್ಸಾಪ್ ಸಂಖ್ಯೆ 9448291072 ಗೆ ಕಳುಹಿಸಬಹುದು.
ಮಂಗಳೂರು ಅಂಚೆ ವಿಭಾಗದ ವ್ಯಾಪ್ತಿಯು ಮಂಗಳೂರು, ಉಳ್ಳಾಲ, ಮೂಲ್ಕಿ ತಾಲೂಕು ಹಾಗೂ ಕಾರ್ಕಳ ತಾಲೂಕಿನ ಬೆಳ್ಮಣ್ಣು ಅಂಚೆ ಕಛೇರಿ ಮತ್ತು ಮುಂಡ್ಕೂರು ಅಂಚೆ ಕಛೇರಿಯನ್ನು ಒಳಗೊಂಡಿರುತ್ತದೆ. ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಮಾತ್ರ ಕಳುಹಿಸುವಂತೆ ಮಂಗಳೂರು ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.





















0 comments:
Post a Comment