ಬಂಟ್ವಾಳ, ಜನವರಿ 14, 2023 (ಕರಾವಳಿ ಟೈಮ್ಸ್) : ತಾಲೂಕಿನ ಅರಳ ಗ್ರಾಮದಲ್ಲಿ ಬಂಟ್ವಾಳ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜನವರಿ 21 ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಾಣಿಲ ಗ್ರಾಮದ ಮುರುವ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಉಪಸ್ಥಿತರಿರಲಿದ್ದು, ಕಂದಾಯ ಇಲಾಖೆ ಸಹಿತ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ ಹಾಗೂ ಇಲಾಖಾ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸುವ ಅವಕಾಶ ಗ್ರಾಮಸ್ಥರಿಗೆ ದೊರೆಯಲಿದೆ.
ಅರಳ ಗ್ರಾಮದ ಸಾರ್ವಜನಿಕರ ಯಾವುದೇ ಅಹವಾಲುಗಳಿದ್ದಲ್ಲಿ ಜನವರಿ 19ರೊಳಗೆ ಗ್ರಾ ಪಂ ದೂರು ಪೆಟ್ಟಿಗೆ, ಗ್ರಾಮ ಲೆಕ್ಕಿಗರು ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಬಹುದು. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಾಲೂಕು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment