ಪುತ್ತೂರು, ಜುಲೈ 31, 2023 (ಕರಾವಳಿ ಟೈಮ್ಸ್) : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಆಗಸ್ಟ್ 4 ರಂದು ಬೆಳಿಗ್ಗೆ 11.30ಕ್ಕೆ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.
ಈ ಅದಾಲತ್ತಿನಲ್ಲಿ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು-ಕೊರತೆಗಳನ್ನು, ತಕರಾರುಗಳನ್ನು ಪರಶೀಲಿಸಲಾಗುವುದು.
ಸಾರ್ವಜನಿಕರು ಪುತ್ತೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಪತ್ರ ಮೂಲಕ “ಅಂಚೆ ಅದಾಲತ್” ತಲೆಬರಹದಡಿ ಆಗಸ್ಟ್ 4ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು-574201 ವಿಳಾಸಕ್ಕೆ ಕಳುಹಿಸಬಹುದು ಅಥವಾ ಅದೇ ದಿನ ಬೆಳಿಗ್ಗೆ 11.30 ರೊಳಗೆ ದೂರವಾಣಿ ಸಂಖ್ಯೆ 08251-230201, 230295ಗೆ ನೇರವಾಗಿಯೂ ಸಂಪರ್ಕಿಸಬಹುದು. ದೂರುಗಳನ್ನು ಇಮೇಲ್ doputtur.ka@indiapost.gov.in ಮೂಲಕವೂ ಅದಾಲತ್ತಿಗೆ ಮುಂಚಿತವಾಗಿ ತಲುಪುವಂತೆ ಕಳುಹಿಸಬಹುದು. ಪುತ್ತೂರು ಅಂಚೆ ವಿಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಪುತ್ತೂರು ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment