ಬಂಟ್ವಾಳ, ಸೆಪ್ಟೆಂಬರ್ 12, 2023 (ಕರಾವಳಿ ಟೈಮ್ಸ್) : ಮಾಜಿ ಸಚಿವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಉಪಾಧ್ಯಕ್ಷರೂ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ರೂವಾರಿಗಳೂ ಆಗಿರುವ ಬಿ ರಮಾನಾಥ ರೈ ಅವರ ಹುಟ್ಟು ಹಬ್ಬ ಪ್ರಯುಕ್ತ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಸೆಪ್ಟೆಂಬರ್ 13 ರಂದು ಬುಧವಾರ (ನಾಳೆ) ಬೆಳಿಗ್ಗೆ 9 ಗಂಟೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರವು ಬಂಟ್ವಾಳ-ಬೈಪಾಸಿನ ಕುಲಾಲ ಸಮಾಜ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.
12 September 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment