ನೇರಳಕಟ್ಟೆ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಆಸ್ಪತ್ರೆಗೆ - Karavali Times ನೇರಳಕಟ್ಟೆ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಆಸ್ಪತ್ರೆಗೆ - Karavali Times

728x90

15 November 2023

ನೇರಳಕಟ್ಟೆ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಆಸ್ಪತ್ರೆಗೆ

ಬಂಟ್ವಾಳ, ನವೆಂಬರ್ 15, 2023 (ಕರಾವಳಿ ಟೈಮ್ಸ್) : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಮಧ್ಯಾಹ್ನ ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. 

ಗಾಯಗೊಂಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯನ್ನು ಸದಾಶಿವ ಎಂದು ಹೆಸರಿಸಲಾಗಿದೆ. ಸದಾಶಿವ ಅವರು ಬುಧವಾರ ಮಧ್ಯಾಹ್ನ ಬಂಟ್ವಾಳ ಸಂಚಾರ ಠಾಣೆಯ ಎಎಸ್ಸೈ ಅವರೊಂದಿಗೆ ನೇರಳಕಟ್ಟೆ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಓಮ್ನಿ ಕಾರನ್ನು ತಪಾಸಣೆಯ ಸಲುವಾಗಿ ನಿಲ್ಲಿಸಲು ಸೂಚನೆ ನೀಡಿದರೂ, ಓಮ್ನಿ ಕಾರಿನ ಚಾಲಕ ರಾಧಾಕೃಷ್ಣ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು, ಸದಾಶಿವ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. 

ಅಪಘಾತದ ತೀವ್ರತೆಗೆ ಸದಾಶಿವ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನೇರಳಕಟ್ಟೆ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಆಸ್ಪತ್ರೆಗೆ Rating: 5 Reviewed By: karavali Times
Scroll to Top