ಅಕ್ರಮ ಪ್ರವೇಶ ಮಾಡಿ ಜಮೀನು ಸ್ವಾಧೀನಕ್ಕೆ ಯತ್ನ, ಜೀವಬೆದರಿಕೆ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಅಕ್ರಮ ಪ್ರವೇಶ ಮಾಡಿ ಜಮೀನು ಸ್ವಾಧೀನಕ್ಕೆ ಯತ್ನ, ಜೀವಬೆದರಿಕೆ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

6 December 2023

ಅಕ್ರಮ ಪ್ರವೇಶ ಮಾಡಿ ಜಮೀನು ಸ್ವಾಧೀನಕ್ಕೆ ಯತ್ನ, ಜೀವಬೆದರಿಕೆ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಡಿಸೆಂಬರ್ 06, 2023 (ಕರಾವಳಿ ಟೈಮ್ಸ್) : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಕಕ್ಕಿಬೆಟ್ಟು ನಿವಾಸಿ ಕರುಣಾಕರ ಶೆಟ್ಟಿ (45) ಅವರ ಅವರ ಜಮೀನಿಗೆ ಮೂವರು ಅಕ್ರಮ ಪ್ರವೇಶ ಮಾಡಿ ಭೂಮಿ ಸ್ವಾಧೀನಪಡಿಸಲು ಯತ್ನಿಸಿದ್ದಲ್ಲದೆ ಜೀವಬೆದರಿಕೆ ಒಡ್ಡಿರುವ ಬಗ್ಗೆ ನ್ಯಾಯಾಲಯದ ಅನುಮತಿಯಂತೆ ಬುಧವಾರ ಪ್ರಕರಣ ದಾಖಲಾಗಿದೆ. 

ಕರುಣಾಕರ ಶೆಟ್ಟಿ ಅವರ ಬಂಟ್ವಾಳ ತಾಲೂಕು ಕೊಡಂಬೆಟ್ಟು ಗ್ರಾಮದ ಕಕ್ಕಿಬೆಟ್ಟು ಎಂಬಲ್ಲಿರುವ ಜಮೀನಿಗೆ ಆರೋಪಿಗಳಾದ ಸಿಪ್ರಿಯನ್ ಕೊಡ್ದೇರೋ, ಲೂಯಿಸ್ ಕೊಡ್ಡೆರೋ ಹಾಗೂ ಮೈಕಲ್ ಕೊಡ್ದೇರೋ ಎಂಬವರು ಅಕ್ರಮ ಪ್ರವೇಶ ಮಾಡಿ ಭೂಮಿಯನ್ನು ಸ್ವಾಧೀನಪಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಕರುಣಾಕರ ಶೆಟ್ಟಿ ಆಕ್ಷೇಪಿಸಿದ್ದು, ಈ ಸಂದರ್ಭ ಆರೋಪಿತರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಲು ಬಂದಿರುವುದಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಯೇ ಸಿದ್ದ ಹಾಗೂ ಈ ಬಗ್ಗೆ ಆಕ್ಷೇಪಿಸಿದರೆ ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ನೀಡಿದ ದೂರಿನಂತೆ ನ್ಯಾಯಾಲಯದ ಅನುಮತಿಯಂತೆ ಬುಧವಾರ ಪೂಂಜಾಲಕಟ್ಟೆ ಠಾಣೆಯಲ್ಲಿ ಅಪರಾಧ ಕ್ರಮಾಂಕ 106/2023 ಕಲಂ 504, 506 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಪ್ರವೇಶ ಮಾಡಿ ಜಮೀನು ಸ್ವಾಧೀನಕ್ಕೆ ಯತ್ನ, ಜೀವಬೆದರಿಕೆ : ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top