ಪುತ್ತೂರು : ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದ ಅಂಗಡಿ ಏಲಂಗೆ ಅಡ್ಡಿಪಡಿಸಿದ ವ್ಯಕ್ತಿಯ ವಿರುದ್ದ ಪೊಲೀಸ್ ದೂರು ದಾಖಲಿಸಿದ ಇಒ - Karavali Times ಪುತ್ತೂರು : ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದ ಅಂಗಡಿ ಏಲಂಗೆ ಅಡ್ಡಿಪಡಿಸಿದ ವ್ಯಕ್ತಿಯ ವಿರುದ್ದ ಪೊಲೀಸ್ ದೂರು ದಾಖಲಿಸಿದ ಇಒ - Karavali Times

728x90

2 January 2024

ಪುತ್ತೂರು : ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದ ಅಂಗಡಿ ಏಲಂಗೆ ಅಡ್ಡಿಪಡಿಸಿದ ವ್ಯಕ್ತಿಯ ವಿರುದ್ದ ಪೊಲೀಸ್ ದೂರು ದಾಖಲಿಸಿದ ಇಒ

ಪುತ್ತೂರು, ಜನವರಿ 03, 2024 (ಕರಾವಳಿ ಟೈಮ್ಸ್) : ಅವಧಿ ಮುಗಿದ ಬಾಡಿಗೆ ಕಟ್ಟಡಕ್ಕೆ ಏಲಂ ಪ್ರಕಟಣೆ ಅಂಟಿಸಿದ ನೋಟೀಸನ್ನು ಕಿತ್ತು ಹಾಕಿ ಅಂಗಡಿ ಕೋಣೆ ಮೇಲೆ ಅಕ್ರಮ ಹಕ್ಕು ಸಾಧಿಸಿದ್ದಲ್ಲದೆ ತಾಲೂಕು ಪಂಚಾಯತ್ ಕಚೇರಿಗೆ ನುಗ್ಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವ್ಯಕ್ತಿಯ ವಿರುದ್ದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪುತ್ತೂರು ನಗರ ಪೊಲೀಸರಿಗೆ ಮಂಗಳವಾರ ದೂರು ನೀಡಿದ್ದಾರೆ. 

ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಅವರು ಈ ಬಗ್ಗೆ ಪುತ್ತೂರು ಪೊಲೀಸರಿಗೆ ದೂರು ನೀಡಿದ್ದು, ಪುತ್ತೂರು ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣ-2 ರ ಕೊಠಡಿ ಸಂಖ್ಯೆ 3ನ್ನು ಬಪ್ಪಳಿಗೆ ನಿವಾಸಿ ಹೇಮಲತಾ ಕೋಂ ರಾಜ ಎಂಬವರಿಗೆ ಈ ಹಿಂದೆ ಬಾಡಿಗೆಗೆ ನೀಡಲಾಗಿತ್ತು. ಇವರು ದೀರ್ಘಕಾಲ ಬಾಡಿಗೆ ಬಾಕಿ ಇರಿಸಿಕೊಂಡ ಹಿನ್ನೆಲೆಯಲ್ಲಿ ನಿಯಮಾನುಸಾರ ಕೊಠಡಿಗೆ ಬೀಗ ಮುದ್ರೆ ಹಾಕಿ ಮರು ಏಲಂ ಪ್ರಕಟಣೆಯನ್ನು ಪ್ರಚಾರಪಡಿಸಲಾಗಿತ್ತು. ಸದ್ರಿ ಪ್ರಕಟಣೆಯ ಪ್ರತಿಯನ್ನು ಕೊಠಡಿಯ ಬಾಗಿಲಿಗೆ ಅಂಟಿಸಲಾಗಿತ್ತು. 

ಕೊಠಡಿಯ ಬಾಡಿಗೆದಾರರಾದ ಹೇಮಲತಾ ಅವರ ಗಂಡ ರಾಜ ಎಂಬವರು, ಮಂಗಳವಾರ (ಜ 2) ಮದ್ಯಾಹ್ನ ಸಮಯ ಕಛೇರಿಯ ಏಲಂ ಪ್ರಕಟಣೆಯ ನೋಟೀಸನ್ನು ಕಿತ್ತು ತೆಗೆದು ತಾಲೂಕು ಪಂಚಾಯತ್ ಕಛೇರಿಗೆ ಅಕ್ರಮ ಪ್ರವೇಶಿಸಿ ಇಒ ಅವರು ಸರಕಾರಿ ಕರ್ತವ್ಯ ನಿರ್ವಹಿಸುತ್ತಿರುವಾಗ ಆರೋಪಿ ವ್ಯಕ್ತಿ ಉದ್ದಟತನದಲ್ಲಿ ವರ್ತಿಸಿ ಬಾಡಿಗೆ ಪಡೆದ ಕೊಠಡಿಯು ತನ್ನದೆಂದು ಗದರಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬುದಾಗಿ ನೀಡಿದ ದೂರಿನಂತೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 01/2024 ಕಲಂ 353 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು : ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದ ಅಂಗಡಿ ಏಲಂಗೆ ಅಡ್ಡಿಪಡಿಸಿದ ವ್ಯಕ್ತಿಯ ವಿರುದ್ದ ಪೊಲೀಸ್ ದೂರು ದಾಖಲಿಸಿದ ಇಒ Rating: 5 Reviewed By: karavali Times
Scroll to Top