ಇಂದು ರಾತ್ರಿ (ಜ 6) ಗುಡ್ಡೆಅಂಗಡಿ ಹಝ್ರತ್ ಶೈಖ್ ಮೌಲವಿ (ನ.ಮ) ಉರೂಸ್ ಸಮಾರೋಪ : ಹಲವು ಗಣ್ಯರು ಭಾಗಿ - Karavali Times ಇಂದು ರಾತ್ರಿ (ಜ 6) ಗುಡ್ಡೆಅಂಗಡಿ ಹಝ್ರತ್ ಶೈಖ್ ಮೌಲವಿ (ನ.ಮ) ಉರೂಸ್ ಸಮಾರೋಪ : ಹಲವು ಗಣ್ಯರು ಭಾಗಿ - Karavali Times

728x90

5 January 2024

ಇಂದು ರಾತ್ರಿ (ಜ 6) ಗುಡ್ಡೆಅಂಗಡಿ ಹಝ್ರತ್ ಶೈಖ್ ಮೌಲವಿ (ನ.ಮ) ಉರೂಸ್ ಸಮಾರೋಪ : ಹಲವು ಗಣ್ಯರು ಭಾಗಿ

 ಬಂಟ್ವಾಳ, ಜನವರಿ 06, 2024 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಮೆಲ್ಕಾರ್-ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ಸಮೀಪ ಅಂತ್ಯವಿಶ್ರಮಗೊಳ್ಳುತ್ತಿರುವ ಹಝ್ರತ್ ಶೈಖ್ ಮೌಲವಿ (ಖಸಿ) ಅವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ 43ನೇ ವರ್ಷದ ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಜನವರಿ 6 ರಂದು ಶನಿವಾರ ಅಸ್ತಮಿಸಿದ ಭಾನುವಾರ ರಾತ್ರಿ (ಇಂದು ರಾತ್ರಿ) ನಡೆಯಲಿದೆ. 

ಶನಿವಾರ ಸುಬ್‍ಹಿ ನಮಾಝ್ ಬಳಿಕ ಎ ಎ ಇಬ್ರಾಹಿಂ ಮುಸ್ಲಿಯಾರ್ ಬೋಗೋಡಿ ಅವರ ನೇತೃತ್ವದಲ್ಲಿ ಖತ್‍ಮುಲ್ ಕುರ್-ಆನ್ ಪಾರಾಯಣ ನಡೆಯಲಿದ್ದು, ಮಗ್ರಿಬ್ ನಮಾಝ್ ಬಳಿಕ ಸಯ್ಯಿದ್ ಹುಸೈನ್ ತಂಙಳ್ ಬಾ-ಅಲವಿ ಕುಕ್ಕಾಜೆ ಅವರ ನೇತೃತ್ವದಲ್ಲಿ ಮೌಲಿದ್ ಪಾರಾಯಣ ನಡೆಯಲಿದೆ. 

ರಾತ್ರಿ 8.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಯ್ಯಿದ್ ಮುಹಮ್ಮದ್ ಸಫ್ವಾನ್ ತಂಙಳ್ ಕಣ್ಣೂರು ದುವಾಶಿರ್ವಚನಗೈಯುವರು. ಅಶ್ರಫ್ ರಹ್ಮಾನಿ ಚೌಕಿ ಮುಖ್ಯ ಭಾಷಣಗೈಯುವರು. ಮಸೀದಿ ಅದ್ಯಕ್ಷ ಅಬೂಬಕ್ಕರ್ ಮೆಲ್ಕಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, ವಕ್ಫ್, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಸತಿ ಸಚಿವ ಬಿ ಝಡ್ ಝಮೀರ್ ಅಹ್ಮದ್, ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿ ಸಚಿವ ಬಿ ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ, ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೆಂಗಳೂರು ರಾಜೀವ್ ಗಾಂಧಿ ವಿಶ್ವವಿದ್ಯಾ£ಲಯ ಸಿಂಡಿಕೇಟ್ ಸದಸ್ಯ ಯು ಟಿ ಇಫ್ತಿಕಾರ್ ಅಲಿ, ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್, ಪಿಡಬ್ಲ್ಯುಡಿ ಕಂಟ್ರಾಕ್ಟರ್ ಇಕ್ಬಾಲ್ ಜೆಟಿಟಿ ಮೊದಲಾದವರು ಭಾಗವಹಿಸುವರು. 

ಮಸೀದಿ ಖತೀಬ್ ಕೆ ಪಿ ಹಸ್ವೀಪ್ ದಾರಿಮಿ, ಮಸೀದಿ ಗೌರವಾಧ್ಯಕ್ಷ ಹಾಜಿ ಬಿ ಎ ಮುಹಮ್ಮದ್ ನೀಮಾ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಎಸ್ ಎಂ ನಗರ, ಮದ್ರಸ ಅಧ್ಯಾಪಕರಾದ ಉಸ್ಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಮುಸ್ಲಿಯಾರ್, ಬಾವಾ ಮುಸ್ಲಿಯಾರ್, ಅಬ್ದುಲ್ ನಾಸಿರ್ ಅಲ್-ಮದನಿ, ರಶೀದ್ ಹನೀಫಿ ಮೊದಲಾದವರು ಉಪಸ್ಥಿತರಿರುವರು. ಸಮಾರೋಪ ಸಮಾರಂಭದ ಕೊನೆಯಲ್ಲಿ ಅನ್ನದಾನ ನಡೆಯಲಿದೆ ಎಂದು ಮಸೀದಿ ಅಧ್ಯಕ್ಷ ಅಬೂಬಕ್ಕರ್ ಮೆಲ್ಕಾರ್ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಇಂದು ರಾತ್ರಿ (ಜ 6) ಗುಡ್ಡೆಅಂಗಡಿ ಹಝ್ರತ್ ಶೈಖ್ ಮೌಲವಿ (ನ.ಮ) ಉರೂಸ್ ಸಮಾರೋಪ : ಹಲವು ಗಣ್ಯರು ಭಾಗಿ Rating: 5 Reviewed By: lk
Scroll to Top