ಪೂಂಜಾಲಕಟ್ಟೆ : ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು - Karavali Times ಪೂಂಜಾಲಕಟ್ಟೆ : ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು - Karavali Times

728x90

16 January 2024

ಪೂಂಜಾಲಕಟ್ಟೆ : ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು

ಬಂಟ್ವಾಳ, ಜನವರಿ 17, 2024 (ಕರಾವಳಿ ಟೈಮ್ಸ್) : ಕೆ ಎಸ್ ಆರ್ ಟಿ ಸಿ ಬಸ್ಸು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಪೂಂಜಾಲಕಟ್ಟೆ ಸರಕಾರಿ ಆಸ್ಪತ್ರೆ ಸಮೀಪ ಮಂಗಳವಾರ ಮಧ್ಯಾಹ್ನ ವೇಳೆ ನಡೆದಿದೆ.

ಮೃತ ಸ್ಕೂಟರ್ ಸವಾರನನ್ನು ನಂದಕುಮಾರ್ ಎಂದು ಹೆಸರಿಸಲಾಗಿದೆ. ಬಸ್ಸು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಬಸ್ಸಿನಡಿಗೆ ಸಿಲುಕಿಕೊಂಡು ಬಸ್ಸು ನಿಂತಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ನಂದಕುಮಾರ್ ಅವರನ್ನು ತಕ್ಷಣ ಸಾರ್ವಜನಿಕರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಬಸ್ಸು ಚಾಲಕ ಬೀಮಪ್ಪ ಸಂಗಪ್ಪ ಮುಗನೂರು ಅವರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಬಗ್ಗೆ ಕುಕ್ಕಳ ನಿವಾಸಿ ಚಿದಾನಂದ ಎಚ್ ಅವರು ನೀಡಿದ ದೂರಿನಂತೆ ಪೂಂಜಾಲಕಟ್ಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


  • Blogger Comments
  • Facebook Comments

0 comments:

Post a Comment

Item Reviewed: ಪೂಂಜಾಲಕಟ್ಟೆ : ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣ ಸಾವು Rating: 5 Reviewed By: karavali Times
Scroll to Top