ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಕಡಬ ಪೊಲೀಸರು : ಆರೋಪಿಗಳ ವಿರುದ್ದ ಪ್ರಕರಣ ದಾಖಲು - Karavali Times ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಕಡಬ ಪೊಲೀಸರು : ಆರೋಪಿಗಳ ವಿರುದ್ದ ಪ್ರಕರಣ ದಾಖಲು - Karavali Times

728x90

2 January 2024

ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಕಡಬ ಪೊಲೀಸರು : ಆರೋಪಿಗಳ ವಿರುದ್ದ ಪ್ರಕರಣ ದಾಖಲು

ಕಡಬ, ಜನವರಿ 03, 2024 (ಕರಾವಳಿ ಟೈಮ್ಸ್) : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಕಡಬ ಪೊಲೀಸರು ವಾಹನ ಸಹಿತ ಮರಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. 

ಕಡಬ ಗ್ರಾಮದ ಕಳಾರ ಎಂಬಲ್ಲಿ ಕಡಬ ಠಾಣಾ ಪಿಎಸ್ಸೈ ಅಭಿನಂದನ್ ಎಂ ಎಸ್ ಅವರ ನೇತೃತ್ವದ ಪೊಲೀಸರು ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಪಿಕಪ್ ವಾಹನ ತಡೆದು ಪರಿಶೀಲನೆ ನಡೆಸಿದಾಗ ಅಕ್ರಮ ಮರಳು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಚಾಲಕ ಕುಂತೂರು ಗ್ರಾಮದ ನಿವಾಸಿ ಸಾದಿಕ್ ಹಾಗೂ ಇನ್ನೋರ್ವ ಸುರೇಶ್ ಎಂಬವರು ಜೊತೆಯಾಗಿ ಕುಂತೂರು ಪದವು ಎಂಬಲ್ಲಿನ ನದಿಯಿಂದ ಮರಳನ್ನು ತೆಗೆದು ಮಾರಾಟಕ್ಕೆ ಸಾಗಿಸುತ್ತಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. 

ಪಿಕಪ್ ವಾಹನ ಸಹಿತ ಮರಳನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ದ ಕಡಬ ಪೆÇಲೀಸು ಠಾಣೆಯಲ್ಲಿ ಅಪರಾಧ ಕ್ರಮಾಂಕ 1/2024 ಕಲಂ 379.34 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಕಡಬ ಪೊಲೀಸರು : ಆರೋಪಿಗಳ ವಿರುದ್ದ ಪ್ರಕರಣ ದಾಖಲು Rating: 5 Reviewed By: karavali Times
Scroll to Top