ಅಕ್ರಮ ಮರಳು ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times ಅಕ್ರಮ ಮರಳು ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

27 January 2024

ಅಕ್ರಮ ಮರಳು ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಬಂಟ್ವಾಳ, ಜನವರಿ 27, 2024 (ಕರಾವಳಿ ಟೈಮ್ಸ್) : ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಚಾಲಕ, ಮರಳು ಸಹಿತ ಲಾರಿಯನ್ನು ವಶಪಡಿಸಿಕೊಂಡು ಘಟನೆ ತೆಂಕಬೆಳ್ಳೂರು ಗ್ರಾಮದ ಧನುಪೂಜೆ-ಮುಡಾಯಿಕೋಡಿ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. 

ಮುಡಾಯಿಕೋಡಿ ಎಂಬಲ್ಲಿ ಲಾರಿಯನ್ನು ತಡೆದು ನಿಲ್ಲಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದಾಗ ಪರವಾನಿಗೆ ರಹಿತ ಮರಳು ಸಾಗಾಟ ಪ್ರಕರಣ ಪತ್ತೆಯಾಗಿದೆ. ಆರೋಪಿ ಲಾರಿ ಚಾಲಕ ರಾಝಿಕ್ ಎಂಬಾತ ಈ ಮರಳನ್ನು ಅಡ್ಡೂರು ಹೊಳೆಯಿಂದ ಕದ್ದು ಸಾಗಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ವಶಪಡಿಸಿಕೊಂಡ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಮರಳು ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top