ಕಾರಿನಲ್ಲಿ ತಲವಾರು ಪತ್ತೆ ಹಚ್ಚಿದ ಪುತ್ತೂರು ನಗರ ಪೊಲೀಸರು : ನಾಲ್ವರು ವಶಕ್ಕೆ - Karavali Times ಕಾರಿನಲ್ಲಿ ತಲವಾರು ಪತ್ತೆ ಹಚ್ಚಿದ ಪುತ್ತೂರು ನಗರ ಪೊಲೀಸರು : ನಾಲ್ವರು ವಶಕ್ಕೆ - Karavali Times

728x90

20 February 2024

ಕಾರಿನಲ್ಲಿ ತಲವಾರು ಪತ್ತೆ ಹಚ್ಚಿದ ಪುತ್ತೂರು ನಗರ ಪೊಲೀಸರು : ನಾಲ್ವರು ವಶಕ್ಕೆ

ಪುತ್ತೂರು, ಫೆಬ್ರವರಿ 20, 2024 (ಕರಾವಳಿ ಟೈಮ್ಸ್) : ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಹಚ್ಚಿದ ಪುತ್ತೂರು ನಗರ ಠಾಣಾ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದ ಘಟನೆ ಸೋಮವಾರ ತಡರಾತ್ರಿ ವೇಳೆ ನಡೆದಿದೆ.

ಸೋಮವಾರ ತಡ ರಾತ್ರಿ ಪುತ್ತೂರು ನಗರ ಪೊಲೀಸ್ ಇನ್ಸ್‍ಪೆಕ್ಟರ್ ಸತೀಶ್ ಜಿ ಜೆ ನೇತೃತ್ವದ ಪೊಲೀಸರು  ಪುತ್ತೂರು ತಾಲೂಕು  ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು  ಪರಿಶೀಲಿಸಿದಾಗ ಕಾರಿನಲ್ಲಿ ಒಂದು ತಲವಾರು ಪತ್ತೆಯಾಗಿರುತ್ತದೆ. 

ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಹಾಗೂ ಕಾನೂನು ಕ್ರಮಕ್ಕಾಗಿ ಕಾರಿನಲ್ಲಿದ್ದ ಬಂಟ್ವಾಳ ತಾಲೂಕು ಗೋಳ್ತಮಜಲು ನಿವಾಸಿ ಕಿಶೋರ್ (36), ಪುತ್ತೂರು ತಾಲೂಕಿನ ಕಬಕ ಗ್ರಾಮದ ನಿವಾಸಿಗಳಾದ ಮನೋಜ್ (23), ಆಶಿಕ್ (28) ಹಾಗೂ ಪಡ್ನೂರು ಗ್ರಾಮದ ನಿವಾಸಿ ಸನತ್ ಕುಮಾರ್ (24) ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಈ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 17/2024 ಕಲಂ 25(1ಬಿ)(ಬಿ) ಆಮ್ರ್ಸ್ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಾರಿನಲ್ಲಿ ತಲವಾರು ಪತ್ತೆ ಹಚ್ಚಿದ ಪುತ್ತೂರು ನಗರ ಪೊಲೀಸರು : ನಾಲ್ವರು ವಶಕ್ಕೆ Rating: 5 Reviewed By: karavali Times
Scroll to Top