ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ಲಪಟಾಯಿಸಿದ ಖದೀಮರು : ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲು - Karavali Times ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ಲಪಟಾಯಿಸಿದ ಖದೀಮರು : ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲು - Karavali Times

728x90

6 February 2024

ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ಲಪಟಾಯಿಸಿದ ಖದೀಮರು : ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲು

ಪುತ್ತೂರು, ಫೆಬ್ರವರಿ 07, 2024 (ಕರಾವಳಿ ಟೈಮ್ಸ್) : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಫೆ 6 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಚಂದ್ರಶೇಖರ ಭಟ್ (62) ಎಂಬವರೇ ಒಟಿಪಿ ನೀಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ. ಮಂಗಳವಾರ (ಫೆ 6) ಚಂದ್ರಶೇಖರ ಭಟ್ ಅವರ ಮೊಬೈಲಿಗೆ ಕೆವೈಸಿ ಅಪ್ಡೆಟ್ ಮಾಡುವ ಕುರಿತು ಸಂದೇಶ ಬಂದಿದ್ದು, ಸದ್ರಿ ಸಂದೇಶದಲ್ಲಿ ತಿಳಿಸಿದ ದೂರವಾಣಿ ಸಂಖ್ಯೆಗೆ ಅವರು ಕರೆ ಮಾಡಿದಾಗ ನಿಮ್ಮ ಖಾತೆ ಬ್ಲಾಕ್ ಆಗಿದೆ. ಒಟಿಪಿ ನೀಡುವಂತೆ ತಿಳಿಸಿದ ಮೇರೆಗೆ ಭಟ್ ಅವರು ಒಟಿಪಿ ನೀಡಿದ್ದಾರೆ. ಇದಾದ ಸ್ವಲ್ಪ ಹೊತ್ತಿನಲ್ಲೇ ಅವರ ಬ್ಯಾಂಕ್ ಖಾತೆಯಿಂದ 1.73 ಲಕ್ಷ ರೂಪಾಯಿ ಹಣ ಕಡಿತಗೊಂಡಿದೆ. 

ಈ ಬಗ್ಗೆ ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ವಂಚಿಸಿದ ಅಪರಿಚಿತ ವ್ಯಕ್ತಿಯ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 24/2024 ಕಲಂ ಐಪಿಸಿ 1860 ಕಲಂ 417, 419, 420 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ಲಪಟಾಯಿಸಿದ ಖದೀಮರು : ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲು Rating: 5 Reviewed By: karavali Times
Scroll to Top