ಕಡಬ : ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು - Karavali Times ಕಡಬ : ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು - Karavali Times

728x90

20 February 2024

ಕಡಬ : ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು

ಕಡಬ, ಫೆಬ್ರವರಿ 20, 2024 (ಕರಾವಳಿ ಟೈಮ್ಸ್) : ಬೈಕಿಗೆ ಹಿಂದಿನಿಂದ ಕೆ ಎಸ್ ಆರ್ ಟಿ ಸಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ಸಮೀಪದ ಬಿಳಿನೆಲೆ ಶಾಲಾ ಬಳಿ ಸೋಮವಾರ ಸಂಭವಿಸಿದೆ. 

ಮೃತ ಬೈಕ್ ಸವಾರರನ್ನು ವಾಸು ಯಾನೆ ವಾಸುದೇವ ಎಂದು ಹೆಸರಿಸಲಾಗಿದೆ. ವಾಸು ಅವರು ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಬಿಳಿನೆಲೆ ಶಾಲಾ ಬಳಿ ಸತೀಶ್ ಎಂಬವರು ಚಲಾಯಿಸುತ್ತಿದ್ದ ಸರಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದು ಈ ಅವಘಾತ ಸಂಭವಿಸಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ವಾಸುದೇವ ಅವರನ್ನು ಸ್ಥಳೀಯರು ತಕ್ಷಣ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೆ ವಾಸು ಅವರು ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಅಪಘಾತಕ್ಕೆ ಬಸ್ಸು ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯವೇ ಕಾರಣ ಎಂದು ಆಪಾದಿಸಲಾಗಿದೆ. ಈ ಬಗ್ಗೆ ಬಿಳಿನೆಲೆ ನಿವಾಸಿ ಪ್ರಕಾಶ್ ಪಿ ಎಸ್ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಕಡಬ : ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು Rating: 5 Reviewed By: karavali Times
Scroll to Top