ನೀರಕಣಿ : ಕೆಲಸ ಬಿಟ್ಟು ನಡೆದುಕೊಂಡು ಬರುತ್ತಿದ್ದ ಪಾದಚಾರಿ ವ್ಯಕ್ತಿ ಕಾರು ಡಿಕ್ಕಿ ಹೊಡೆದು ಮೃತ್ಯು - Karavali Times ನೀರಕಣಿ : ಕೆಲಸ ಬಿಟ್ಟು ನಡೆದುಕೊಂಡು ಬರುತ್ತಿದ್ದ ಪಾದಚಾರಿ ವ್ಯಕ್ತಿ ಕಾರು ಡಿಕ್ಕಿ ಹೊಡೆದು ಮೃತ್ಯು - Karavali Times

728x90

25 February 2024

ನೀರಕಣಿ : ಕೆಲಸ ಬಿಟ್ಟು ನಡೆದುಕೊಂಡು ಬರುತ್ತಿದ್ದ ಪಾದಚಾರಿ ವ್ಯಕ್ತಿ ಕಾರು ಡಿಕ್ಕಿ ಹೊಡೆದು ಮೃತ್ಯು

ಬಂಟ್ವಾಳ, ಫೆಬ್ರವರಿ 26, 2024 (ಕರಾವಳಿ ಟೈಮ್ಸ್) : ಕೆಲಸ ಮುಗಿಸಿಕೊಂಡು ಮನೆ ಕಡೆ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯೋರ್ವರು ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ವಿಟ್ಲ ಕಸಬಾ ಗ್ರಾಮದ ನೀರಕಣಿ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. 

ಮೃತ ಪಾದಚಾರಿ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಯಶೋಧರ (38) ಎಂದು ಗುರುತಿಸಲಾಗಿದೆ. ಇವರು ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ನಡೆದುಕೊಂಡು ಬರುತ್ತಿದ್ದ ವೇಳೆ ಶಫೀಕ್ ಎಂಬಾತನ ಚಲಾಯಿಸಿಕೊಂಡು ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಯಶೋಧರ ಅವರನ್ನು ತಕ್ಷಣ ವಿಟ್ಲ ಸಮುದಾಯ ಅರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೃತರ ಸಹೋದರ ಸುರೇಶ್ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ನೀರಕಣಿ : ಕೆಲಸ ಬಿಟ್ಟು ನಡೆದುಕೊಂಡು ಬರುತ್ತಿದ್ದ ಪಾದಚಾರಿ ವ್ಯಕ್ತಿ ಕಾರು ಡಿಕ್ಕಿ ಹೊಡೆದು ಮೃತ್ಯು Rating: 5 Reviewed By: karavali Times
Scroll to Top