ಕರಾವಳಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ - Karavali Times ಕರಾವಳಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ - Karavali Times

728x90

29 February 2024

ಕರಾವಳಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ

ಮಂಗಳೂರು, ಮಾರ್ಚ್ 01, 2024 (ಕರಾವಳಿ ಟೈಮ್ಸ್) : ಕರಾವಳಿಯ ಹಿರಿಯ ಪತ್ರಕರ್ತ, ಉತ್ತಮ ಕಾರ್ಯಕ್ರಮ ನಿರೂಪಕ, ಕವಿ, ಕಥೆಗಾರ ಉದಯವಾಣಿ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರಾಗಿದ್ದ ಮನೋಹರ ಪ್ರಸಾದ್ (64) ಅವರು ಶುಕ್ರವಾರ (ಮಾರ್ಚ್ 1) ಮುಂಜಾನೆ ನಿಧನರಾದರು. 

ಕಾರ್ಕಳ ತಾಲೂಕು ಕರುವಾಲು ಗ್ರಾಮದ ಮೂಲತಃ ನಿವಾಸಿಯಾಗಿದ್ದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಶಿಕ್ಷಣ ಮುಗಿಸಿ “ನವ ಭಾರತ’ ಪತ್ರಿಕೆಯ ಮೂಲಕ ವೃತ್ತಿ ಜೀವನಕ್ಕೆ ಬಂದಿದ್ದರು. ಬಳಿಕ “ಉದಯವಾಣಿ’ ಪತ್ರಿಕೆಯ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡು, ನಂತರ ಮುಖ್ಯ ವರದಿಗಾರರಾಗಿ, ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಕಾಲ ಜರ್ನಲಿಸಂ ಕಾರ್ಯನಿರ್ವಹಿಸಿ ಕಳೆದ ಎರಡು ವರ್ಷದ ಹಿಂದೆ ಪತ್ರಕರ್ತ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿಕೊಂಡಿದ್ದರು. 

ಅವರಿಗೆ ಕರ್ನಾಟಕ ರಾಜ್ಯೋ ತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್ ಅಮೃತೋತ್ಸವ ಪುರಸ್ಕಾರ ಸಹಿತ ಹಲವು ಪುರಸ್ಕಾರಗಳು ಅರಸಿ ಬಂದಿತ್ತು. 

  • Blogger Comments
  • Facebook Comments

0 comments:

Post a Comment

Item Reviewed: ಕರಾವಳಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ Rating: 5 Reviewed By: karavali Times
Scroll to Top