ಬಿಜೆಪಿ ಹಾಗೂ ಮೋದಿ ಸರಕಾರದ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಕಾಂಗ್ರೆಸ್ಸಿನಿಂದ ತಕ್ಕ ಪ್ರತ್ಯುತ್ತರ : ಸಚಿವ ಗುಂಡೂರಾವ್ - Karavali Times ಬಿಜೆಪಿ ಹಾಗೂ ಮೋದಿ ಸರಕಾರದ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಕಾಂಗ್ರೆಸ್ಸಿನಿಂದ ತಕ್ಕ ಪ್ರತ್ಯುತ್ತರ : ಸಚಿವ ಗುಂಡೂರಾವ್ - Karavali Times

728x90

9 February 2024

ಬಿಜೆಪಿ ಹಾಗೂ ಮೋದಿ ಸರಕಾರದ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಕಾಂಗ್ರೆಸ್ಸಿನಿಂದ ತಕ್ಕ ಪ್ರತ್ಯುತ್ತರ : ಸಚಿವ ಗುಂಡೂರಾವ್

ಮಂಗಳೂರು, ಫೆಬ್ರವರಿ 09, 2024 (ಕರಾವಳಿ ಟೈಮ್ಸ್) : ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ವಿವಿಧ 20 ಮುಂಚೂಣಿ ಘಟಕಗಳ ಪದಾಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದರು.

ಬಳಿಕ ಮಾತನಾಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿರುವ ಬಿಜೆಪಿ ಹಾಗೂ ಮೋದಿ ಸರಕಾರದ ಕ್ರಮಕ್ಕೆ ಪರಿಹಾರವಾಗಿ ಯಾವ ರೀತಿ ಕಾಂಗ್ರೆಸ್ ಕಾರ್ಯಕರ್ತರು ಹೆಜ್ಜೆ ಇಡಬೇಕು ಎಂಬ ರೀತಿಯಲ್ಲಿ ದಿನವಿಡೀ ನಡೆದ ಸಭೆಯಲ್ಲಿ ವಿಮರ್ಶಿಸಲಾಯಿತು ಎಂದರು. 

ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ. ಬಾವ, ಮಿಥುನ್ ರೈ, ಇನಾಯತ್ ಅಲಿ, ಮಮತಾ ಗಟ್ಟಿ, ಕೃಪಾ ಆಳ್ವ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್, ಪ್ರಮುಖರಾದ ಕಣಚೂರು ಮೋನು, ಭರತ್ ಮುಂಡೋಡಿ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಿಜೆಪಿ ಹಾಗೂ ಮೋದಿ ಸರಕಾರದ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಕಾಂಗ್ರೆಸ್ಸಿನಿಂದ ತಕ್ಕ ಪ್ರತ್ಯುತ್ತರ : ಸಚಿವ ಗುಂಡೂರಾವ್ Rating: 5 Reviewed By: karavali Times
Scroll to Top