ಬೆಳ್ತಂಗಡಿ : ರಸ್ತೆ ಬದಿ ಧರೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಕಾರು, ಚಾಲಕ ಸಾವು, ಇಬ್ಬರಿಗೆ ಗಾಯ - Karavali Times ಬೆಳ್ತಂಗಡಿ : ರಸ್ತೆ ಬದಿ ಧರೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಕಾರು, ಚಾಲಕ ಸಾವು, ಇಬ್ಬರಿಗೆ ಗಾಯ - Karavali Times

728x90

29 March 2024

ಬೆಳ್ತಂಗಡಿ : ರಸ್ತೆ ಬದಿ ಧರೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಕಾರು, ಚಾಲಕ ಸಾವು, ಇಬ್ಬರಿಗೆ ಗಾಯ

ಬೆಳ್ತಂಗಡಿ, ಮಾರ್ಚ್ 29, 2024 (ಕರಾವಳಿ ಟೈಮ್ಸ್) : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟು ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. 

ಮೃತ ಕಾರು ಚಾಲಕನನ್ನು ಪ್ರೈಸ್ ಮ್ಯಾಥ್ಯೂ ಎಂದು ಹೆಸರಿಸಲಾಗಿದೆ. ಗಾಯಾಳು ಪ್ರಯಾಣಿಕರನ್ನು ನಿತಿನ್ ಸಿ ಆರ್ ಹಾಗೂ ಅರುಣ್ ಜೆ ಎಂದು ಗುರುತಿಸಲಾಗಿದೆ. ಮ್ಯಾಥ್ಯೂ ಅವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಮೀರಿ ಶಕ್ತಿ ನಗರ ಎಂಬಲ್ಲಿ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಅಪಘಾತದಿಂದ ಮೂರೂ ಮಂದಿ ಪ್ರಯಾಣಿಕರಿಗೂ ಗಾಯಗಳಾಗಿವೆ. ಚಾಲಕ ಪ್ರೈಸ್ ಮ್ಯಾಥ್ಯೂ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ಗಾಯಾಳುಗಳಾದ ಅರುಣ್ ಹಾಗೂ ನಿತಿನ್ ಸಿ ಆರ್ ಅವರನ್ನು ಉಜಿರೆ ಎಸ್ ಡಿ ಎಂ ಆಸ್ಪತ್ರೆ ಹಾಗೂ ಗುರುವಾಯನಕೆರೆ ಅಭಯ ಆಸ್ಪತ್ರೆಗೆ  ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬೆಳ್ತಂಗಡಿ : ರಸ್ತೆ ಬದಿ ಧರೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಕಾರು, ಚಾಲಕ ಸಾವು, ಇಬ್ಬರಿಗೆ ಗಾಯ Rating: 5 Reviewed By: karavali Times
Scroll to Top