ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು, ಸಹ ಸವಾರೆಗೆ ಗಂಭೀರ ಗಾಯ - Karavali Times ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು, ಸಹ ಸವಾರೆಗೆ ಗಂಭೀರ ಗಾಯ - Karavali Times

728x90

29 March 2024

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು, ಸಹ ಸವಾರೆಗೆ ಗಂಭೀರ ಗಾಯ

ಬೆಳ್ತಂಗಡಿ, ಮಾರ್ಚ್ 29, 2024 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿ ಮೃತಪಟ್ಟು, ದ್ವಿಚಕ್ರ ವಾಹನ ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮೀಪದ ಸಂತೆಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. 

ಮೃತ ಪಾದಚಾರಿಯನ್ನು ಶೇಖರ ಬಂಗೇರ ಎಂದು ಗುರುತಿಸಲಾಗಿದ್ದು, ಗಾಯಗೊಂಡ ದ್ವಿಚಕ್ರ ವಾಹನ ಸಹಸವಾರೆಯನ್ನು ಅನುಷಾ ಎಂದು ಹೆಸರಿಸಲಾಗಿದೆ. ಮಿಥುನ್ ಎಂಬವರು ಅನುಷಾ ಅವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಸಂಚರಿಸುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಶೇಖರ ಬಂಗೇರ ಅವರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಅಪಘಾತದಿಂದ ಮೂವರು ಕೂಡಾ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಶೇಖರ ಬಂಗೇರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ, ಸಹಸವಾರೆ ಅನುಷಾ ಅವರನ್ನು ಮಂಗಳೂರು-ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ  ಬೆಳ್ತಂಗಡಿ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು, ಸಹ ಸವಾರೆಗೆ ಗಂಭೀರ ಗಾಯ Rating: 5 Reviewed By: karavali Times
Scroll to Top