ಮಾಣಿ : ಕಚೇರಿಗೆ ತೆರಳುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಚಿನ್ನದ ಸರ ಹಾಗೂ ನಗದು ಹಣ ಕಸಿದುಕೊಂಡ ದಂಪತಿ - Karavali Times ಮಾಣಿ : ಕಚೇರಿಗೆ ತೆರಳುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಚಿನ್ನದ ಸರ ಹಾಗೂ ನಗದು ಹಣ ಕಸಿದುಕೊಂಡ ದಂಪತಿ - Karavali Times

728x90

6 March 2024

ಮಾಣಿ : ಕಚೇರಿಗೆ ತೆರಳುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಚಿನ್ನದ ಸರ ಹಾಗೂ ನಗದು ಹಣ ಕಸಿದುಕೊಂಡ ದಂಪತಿ

ಬಂಟ್ವಾಳ, ಮಾರ್ಚ್ 07, 2024 (ಕರಾವಳಿ ಟೈಮ್ಸ್) : ಕಚೇರಿಗೆ ತೆರಳುತ್ತಿದ್ದ ವ್ಯಕ್ತಿಯ ಬೈಕನ್ನು ತಡೆದ ಕಾರಿನಲ್ಲಿ ಬಂದ ದಂಪತಿ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದುಕೊಂಡ ಘಟನೆ ಮಾಣಿ ಜಂಕ್ಷನ್ನಿನಲ್ಲಿ ಮಂಗಳವಾರ ನಡೆದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ಬಗ್ಗೆ ಮಾಣಿ ನಿವಾಸಿ ಸ್ಟೀವನ್ ಆಲ್ವೀನ್ ಪಾಯಸ್ (51) ಅವರು ಪೊಲೀಸರಿಗೆ ದೂರು ನೀಡಿದ್ದು, ಇವರು ಮಂಗಳವಾರ ಬೆಳಿಗ್ಗೆ ಬೈಕಿನಲ್ಲಿ ಕಛೇರಿಗೆ ತೆರಳುತ್ತಿದ್ದ ವೇಳೆ ಮಾಣಿ ಜಂಕ್ಷನ್ನಿಗೆ ತಲುಪಿದಾಗ ಕಾರಿನಲ್ಲಿ ಬಂದ ಆರೋಪಿಗಳಾದ ಮಲ್ವಿನ್ ಕಿಶೋರ್ ಮಾರ್ಟಿಸ್ ಹಾಗೂ ಆತನ ಪತ್ನಿ ಶಾಂತಿ ಮಾರ್ಟಿಸ್ ಎಂಬವರು ಪಾಯಸ್ ಅವರನ್ನು ತಡೆದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುತ್ತಾರೆ. ಬಳಿಕ ಆಲ್ವಿನ್ ಪಾಯಸ್ ಅವರ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 5 ಪವನಿ ಚಿನ್ನದ ಸರ ಹಾಗೂ ಪರ್ಸ್ ನಲ್ಲಿದ್ದ 18 ಸಾವಿರ ರೂಪಾಯಿ ಹಣವನ್ನು ಕಸಿದುಕೊಂಡು ಅವ್ಯಾಚವಾಗಿ ಬೈದು ತೆರಳಿರುತ್ತಾರೆ ಎಂದು ದೂರಲಾಗಿದೆ. 

ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 34/2024 ಕಲಂ 341, 355, 323, 504, 506, 392 ಆರ್/ಡಬ್ಲ್ಯು 34 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. 


  • Blogger Comments
  • Facebook Comments

0 comments:

Post a Comment

Item Reviewed: ಮಾಣಿ : ಕಚೇರಿಗೆ ತೆರಳುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿ ಚಿನ್ನದ ಸರ ಹಾಗೂ ನಗದು ಹಣ ಕಸಿದುಕೊಂಡ ದಂಪತಿ Rating: 5 Reviewed By: karavali Times
Scroll to Top