ಕಡಬ : ಅಕ್ರಮ ಜಾನುವಾರು ಸಾಗಾಟದ ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ದಾರುಣ ಸಾವು - Karavali Times ಕಡಬ : ಅಕ್ರಮ ಜಾನುವಾರು ಸಾಗಾಟದ ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ದಾರುಣ ಸಾವು - Karavali Times

728x90

31 March 2024

ಕಡಬ : ಅಕ್ರಮ ಜಾನುವಾರು ಸಾಗಾಟದ ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ದಾರುಣ ಸಾವು

ಕಡಬ, ಮಾರ್ಚ್ 31, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಪಾದಚಾರಿ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಮರ್ಧಾಳ ಪೇಟೆಯಲ್ಲಿ ಶನಿವಾರ ರಾತ್ರಿ ನಡೆದಿದೆ. 

ಮೃತ ವ್ಯಕ್ತಿಯನ್ನು ಇಲ್ಲಿನ ನಿವಾಸಿ ವಿಠಲ ರೈ (75) ಎಂದು ಹೆಸರಿಸಲಾಗಿದೆ. ಇವರು ಮರ್ಧಾಳ ಪೇಟೆಯಲ್ಲಿ ಮಾರ್ಗದ ಬದಿ ನಿಂತಿದ್ದ ವೇಳೆ ಏಕಾಏಕಿ ಧಾವಿಸಿ ಬಂದ ಮಾರುತಿ 800 ಕಾರನ್ನು ಅದರ ಚಾಲಕ ಡಿಕ್ಕಿ ಹೊಡೆಸಿದ್ದಾನೆ ಎನ್ನಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ವಿಠಲ ರೈ ಅವರನ್ನು ತಕ್ಷಣ ಸ್ಥಳೀಯರು ಕಡಬ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ. 

ಕಾರಿನಲ್ಲಿದ್ದ ಆರೋಪಿಗಳು ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದು, ಉದ್ದೇಶಪೂರ್ವಕವಾಗಿ ವಿಠಲ ರೈ ಅವರಿಗೆ ಡಿಕ್ಕಿ ಹೊಡೆಸಿ ಅಪಘಾತ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮೃತರ ಸಂಬಂಧಿ ಸುಳ್ಯ-ಉಬರಡ್ಕ ನಿವಾಸಿ ಸುಧಾಕರ ರೈ ಎಸ್ ಅವರು ನೀಡಿದ ದೂರಿನಂತೆ ಕಡಬ ಪೆÇಲೀಸು ಠಾಣೆಯಲ್ಲಿ ಅಪರಾಧ ಕ್ರಮಾಂಕ 45/2024 ಕಲಂ 302 ಜೊತೆಗೆ 34 ಐಪಿಸಿ ಮತ್ತು ಕಲಂ 4, 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಡಬ : ಅಕ್ರಮ ಜಾನುವಾರು ಸಾಗಾಟದ ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ದಾರುಣ ಸಾವು Rating: 5 Reviewed By: karavali Times
Scroll to Top